K2 ಕ್ರೈಂ ನ್ಯೂಸ್ : ಸೇನೆ ಸೇರುವ ಕನಸು ಹೊತ್ತಿರುವ ಯುವಕರನ್ನೇ, ಟಾರ್ಗೆಟ್ ಮಾಡಿ ಖದೀಮರು ಸುಮಾರು 150 ಯುವಕರಿಗೆ, ಭಾರತೀಯ ಸೈನ್ಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಒಂದು ಕೋಟಿಗೂ ಹೆಚ್ಚು ಹಣ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಸೇನೆಗೆ ಸೇರಿಸುವ ನೆಪದಲ್ಲಿ150 ಯುವಕರಿಗೆ ವಂಚನೆ ಮಾಡಲಾಗಿದೆ ಎಂಬ ವಿಚಾರ ಗಮನಕ್ಕೆ ಬರುತ್ತಿದ್ದಂತೆ. ಪೊಲೀಸ್ ಹಾಗೂ ಮಿಲಿಟರಿ ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆ ಮೂಲಕ ನಕಲಿ ಸೇನಾ ನೇಮಕಾತಿ ಹಗರಣವನ್ನು ಬಯಲಿಗೆಳೆದಿದ್ದಾರೆ.
ಚಿತ್ರದುರ್ಗದಲ್ಲಿ ವಂಚಕ ಮತ್ತು ಆತನ ಸಹಚರರ ಬಂಧನ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಶಿವರಾಜ್ ವಟಗಲ್(40), ಹೆಂಡತಿ ಭೀಮವ್ವ ಕೂಡ ಕೃತ್ಯಕ್ಕೆ ಸಾಥ್ ನೀಡಿದ್ದರಿಂದ ಇಬ್ಬರನ್ನೂ ಬಂಧಿಸಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
[ays_poll id=3]