This is the title of the web page
This is the title of the web page
State News

ಕನ್ನಡ ಉಳಿಸಿ, ಬೆಳೆಸಲು 1ಲಕ್ಷ ಪ್ರೋತ್ಸಾಹ


K2 ನ್ಯೂಸ್ ಡೆಸ್ಕ್: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಲು ನೆರವಾಗುವ ಉದ್ದೇಶದಿಂದ, ಅಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಗಳಿಗೆ 1 ಲಕ್ಷ ನೆರವು ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗೋವಾ ರಾಜ್ಯದ 19 ಜಿಲ್ಲೆಗಳು ಹೊಂದಿಕೊಂಡಿವೆ. ಈ ಜಿಲ್ಲೆಗಳಲ್ಲಿ ಕನ್ನಡ ನಾಡು-ನುಡಿ, ಸಂಸ್ಕೃತಿಗೆ ಸಂಬಂಧಿಸಿದಂತೆ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ, ಕನ್ನಡ ಉಳಿಸಿ, ಬೆಳೆಸಲು ಪ್ರೋತ್ಸಾಹ ನೀಡಲು ಪ್ರಾಧಿಕಾರ ಮುಂದಾಗಿದೆ.ಗಡಿ ಜಿಲ್ಲೆಗಳ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ಇದೇ 28ರಂದು ಬೆಳಿಗ್ಗೆ 11 ಗಂಟೆಗೆ ಕೆಂಪೇಗೌಡ ರಸ್ತೆಯ ಎಫ್‌ಕೆಸಿಸಿಐ ಕಟ್ಟಡದ ಮೂರನೇ ಮಹಡಿಯಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅನುದಾನ ವಿತರಿಸಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ತಿಳಿಸಿದ್ದಾರೆ.


[ays_poll id=3]