This is the title of the web page
This is the title of the web page
Crime News

14 ತಿಂಗಳ ಮಗುವನ್ನು ಕೊಂದ ಕ್ರೂರಿ ತಂದೆ


ಲಿಂಗಸುಗೂರು : ಎರಡನೇ ಮದುವೆಗೆ ಅಡ್ಡಿಯಾಗಿದ್ದ 14 ತಿಂಗಳ ಮಗುವನ್ನು ತಂದೆಯೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕನಸವಿಯ ಗ್ರಾಮದಲ್ಲಿ ವರದಿಯಾಗಿದೆ.

ಲಿಂಗಸುಗೂರು ತಾಲೂಕಿನ ಕನಸಾವಿ ಗ್ರಾಮದ ನಿವಾಸಿ 32 ವರ್ಷದ ಮಹಾಂತೇಶ್ ಆರೋಪಿಯಾಗಿದ್ದು, ಮೃತ ಮಗುವನ್ನು ಅಭಿನವ (14) ಎಂದು ಗುರುತಿಸಲಾಗಿದೆ. ಪತ್ನಿಯ ಅನೈತಿಕ ಸಂಬಂಧದ ಅನುಮಾನದಿಂದ ಮತ್ತೊಂದು ಮದುವೆಯಾಗಲು ಇಚ್ಚಿಸಿದ್ದ. ಆದರೆ ಆ ಮದುವೆಗೆ ಮಗು ಅಡ್ಡಿಯಾಗಿತ್ತು ಎಂದು ಹೇಳಲಾಗುತ್ತಿತ್ತು. ಆ ಹಿನ್ನಲೆಯಲ್ಲಿ ಆರೋಪಿ ಮಗುವನ್ನು ಕೊಲೆ ಮಾಡಿ ಕನಸವಿ ಗ್ರಾಮದ ಹೊರವಲಯದಲ್ಲಿ ಮೃತದೇಹವನ್ನು ಬಚ್ಚಿಟ್ಟಿದ್ದ ಎಂದು ಹೇಳಲಾಗುತ್ತಿದೆ. ಮಗು ಕಾಣೆಯಾದ ಹಿನ್ನೆಲೆಯಲ್ಲಿ ಪತ್ನಿ ಭೀಮವ್ವ ಮುದಗಲ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಮಗು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಿಸಿಕೊಡಿದ್ದ ಪೊಲೀಸರಿಗೆ ಮಹಾಂತೇಶ್ ಮೇಲೆ ಅನುಮಾನ ಬಂದಿದೆ. ವಿಚಾರಣೆಗೊಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದು, ಮಗುವಿನ ಮೃತದೇಹವನ್ನು ಸುಟ್ಟಿರುವುದಾಗಿ ಹೇಳಿದ್ದ. ಮೂರು ದಿನಗಳ ಬಳಿಕ ಶವ ಬಚ್ಚಿಟ್ಟಿರುವ ಸ್ಥಳವನ್ನು ತೋರಿಸಿದ್ದಾನೆನ್ನಲಾಗಿದೆ.


[ays_poll id=3]