ಕಲ್ಲೂರು : ಒಂದೇ ಕುಟುಂಬದ 4 ಜನ ಸಾವು, ಒಬ್ಬರ ಸ್ಥಿತಿ ಗಂಭೀರ..

K 2 Kannada News
ಕಲ್ಲೂರು : ಒಂದೇ ಕುಟುಂಬದ 4 ಜನ ಸಾವು, ಒಬ್ಬರ ಸ್ಥಿತಿ ಗಂಭೀರ..
WhatsApp Group Join Now
Telegram Group Join Now

K2kannadanews.in

family suicide ರಾಯಚೂರು : ಒಂದೇ ಕುಟುಂಬದ ಐವರು ವಿಷಹಾರ ಸೇವಿಸಿ ಮೃತಪಟ್ಟ ದಾರುಣ ಘಟನೆ ಕಾಲ್ಲೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ನಡೆದಿದೆ. ಭೀಮಣ್ಣ (60), ಭೀಮಣ್ಣನ ಪತ್ನಿ ಈರಮ್ಮ (54), ಭೀಮಣ್ಣನ ಮಗ ಮಲ್ಲೇಶ್ (19), ಮಗಳು ಪಾರ್ವತಿ (17) ಸಾವಿಗೀಡಾದವರು. ಮತ್ತೊಬ್ಬ ಮಗಳು ಮಲ್ಲಮ್ಮ (18) ಎಂಬಾಕೆಯ ಸ್ಥಿತಿ ಗಂಭೀರವಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬುಧವಾರ ರಾತ್ರಿ ಇಡೀ ಕುಟುಂಬ ಮಟನ್ ಕೊಂಡು ತಂದು ಅಡುಗೆ ಮಾಡಿ ಜೊತೆಯಾಗಿ ಊಟ ಮಾಡಿತ್ತು.

ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರಬಹುದು ಎಂಬ ಶಂಕೆಯಿದೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಇದು ಫುಡ್ ಪಾಯ್ಸನ್ ಅಲ್ಲ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದೂ ಕೆಲವರು ತರ್ಕಿಸಿದ್ದಾರೆ. ಎಂಎಲ್‌ಸಿ ವರದಿ ಆಧರಿಸಿ ಫುಡ್ ಪಾಯ್ಸನ್ ಅಂತ ಪ್ರಾಥಮಿಕ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಆತ್ಮಹತ್ಯೆ ಆರೋಪದ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

WhatsApp Group Join Now
Telegram Group Join Now
Share This Article