ಆಶ್ರಮದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮೇಲೆ ಗುರುವಿನಿಂದ ಮನಸೋಇಚ್ಚೆ ಥಳಿತ: ಬಾಲಕನಿಗೆ ಗಂಭೀರಗಾಯ

K 2 Kannada News
ಆಶ್ರಮದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮೇಲೆ ಗುರುವಿನಿಂದ ಮನಸೋಇಚ್ಚೆ ಥಳಿತ: ಬಾಲಕನಿಗೆ ಗಂಭೀರಗಾಯ
Oplus_131072
WhatsApp Group Join Now
Telegram Group Join Now

K2kannadanews.in

Gruju Beating child ರಾಯಚೂರು: ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಕಣ್ಣಿಗೆ ಕಾರದಪುಡಿ ಹಾಕಿ, ಬೆಲ್ಟ್ ನಿಂದ ಹೊಡೆದು ಮನಸೋಇಚ್ಚೆ ಥಳಿಸಿರುವ ಘಟನೆ ನಡೆದಿದೆ.ಸರ್ಕಾರಿ ಶಾಲೆಯಲ್ಲಿ ಓದುತ್ತಾ, ಬಡತನದ ಕಾರಣ ಆಶ್ರಮದಲ್ಲಿದ್ದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಆಶ್ರಮದಲ್ಲಿನ ಪಿ ವೇಣುಗೋಪಾಲ್ ಸ್ವಾಮಿ ಎಂಬ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದೆ.3 ನೇ ತರಗತಿ ವಿದ್ಯಾರ್ಥಿ ಶ್ರವಣ್ ಕುಮಾರ್ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯ ಉದಯನಗರದಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಘಟನೆ ನಡೆದಿದೆ. ಮನಬಂದಂತೆ ಬಾಲಕನಿಗೆ ಥಳಿಸಿ, ಮೂರು ದಿನ ಕತ್ತಲೆ ಕೋಣೆಯಲ್ಲಿ ಕೂಡಿಹಾಕಲಾಗಿತ್ತು ಅನ್ನೋ ಆರೋಪವಿದೆ.

https://www.facebook.com/share/v/XDgRJn5RfSV4rVhg/?mibextid=lpLi9V

ಆಕಸ್ಮಿಕವಾಗಿ ಆಶ್ರಮಕ್ಕೆ ಭೇಟಿ ನೀಡಿದ ಬಾಲಕನ ತಾಯಿಗೆ ವಿಷಯ ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಕ್ಕಳಿಗೆ ಆಶ್ರಯ ನೀಡುತ್ತೇನೆಂದು ಪಿ ವೇಣುಗೋಪಾಲ್ ಸ್ವಾಮಿ ಹಿಂಸೆ ಕೊಡುತ್ತಿದ್ದಾನೆ ಅಂತ ಮಕ್ಕಳ ಪೋಷಕರು ಆರೋಪಿಸಿದ್ದಾರೆ. ನಗರದ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article