ಹಳ್ಳದ ನೀರಿನಲ್ಲಿ ಕೊಚ್ಚಿಹೋದ ಯುವಕ‌ : ಶೋಧಕಾರ್ಯ

K 2 Kannada News
ಹಳ್ಳದ ನೀರಿನಲ್ಲಿ ಕೊಚ್ಚಿಹೋದ ಯುವಕ‌ : ಶೋಧಕಾರ್ಯ
WhatsApp Group Join Now
Telegram Group Join Now

K2kannadanews.in

Heavy Rain ರಾಯಚೂರು : ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಹಳ್ಳ ಕೊಳ್ಳಗಳು ಮೈದುಂಬಿ ಹರಿಯುತ್ತಿದ್ದು. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನೋರ್ವ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ಪತ್ತೆಪುರ ಗ್ರಾಮದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯಲ್ಲಿ ರಾತ್ರಿಯಿಡೀ ಸುರಿದ ಮಳೆ ಹಲವಾರು ಅವಾಂತರಗಳನ್ನ ಸೃಷ್ಟಿಸಿದೆ. ತಾಲೂಕಿನ ಪತ್ತೆಪೂರ, ಸುಲ್ತಾನಪುರ ಹಳ್ಳಗಳು ತುಂಬಿ ಹರಿಯುತ್ತಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ. ಪತ್ತೆಪೂರ ಬಳಿಯ ಗೋಕುಲಸಾಬ ಹಳ್ಳ ದಾಟುತ್ತಿದ್ದ ವೇಳೆ 33 ವರ್ಷದ ಯುವಕ ಬಸವರಾಜ್ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದಾನೆ.

ರಾತ್ರಿ ವೇಳೆ ಘಟನೆ ನಡೆದಿದ್ದು ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಹಳ್ಳದಲ್ಲಿ ಕೊಚ್ಚಿಹೋದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೂ ಸಿಕ್ಕಿಲ್ಲ. ಬೆಳಗಿನ ಜಾವ ಮತ್ತೆ ಗ್ರಾಮಸ್ಥರು, ಪೊಲೀಸ್ ಇಲಾಖೆ, ಅಗ್ನಿಶಾಮಕದಳ ಸಿಬ್ಬಂದಿಗಳು ಕೊಚ್ಚಿಹೋದ ಯುವನ ಹುಡುಕಾಟ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article