ಜಗಳ ಬಿಡಿಸಲು ಹೋದವನಿಗೆ ಬಿದ್ದ ಏಟಿನಿಂದ ಸ್ಥಳದಲ್ಲಿಯೇ ಸಾವು..

K 2 Kannada News
ಜಗಳ ಬಿಡಿಸಲು ಹೋದವನಿಗೆ ಬಿದ್ದ ಏಟಿನಿಂದ ಸ್ಥಳದಲ್ಲಿಯೇ ಸಾವು..
WhatsApp Group Join Now
Telegram Group Join Now

K2kannadanews.in

Crime News ಸಿಂಧನೂರು : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ಒಬ್ಬರ ಸಾವಿನಲ್ಲಿ ಕೊನೆಗೊಂಡ ಘಟನೆ ತಾಲೂಕಿನ 3ನೇ ಮೈಲ್ ಕ್ಯಾಂಪಿನಲ್ಲಿ ಶನಿವಾರ ರಾತ್ರಿ ನಡೆದಿದೆ.

ರಾಯಚೂರಿನ ಸಿಂಧನೂರು(Sindhanur) ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಈ ವೇಳೆ ಜಗಳ ಬಿಡಿಸಲು ಹೋಗಿದ್ದ 60 ವರ್ಷದ ವೃದ್ದ ವೀರಬಸಪ್ಪ ಮೃತಪಟ್ಟಿದ್ದಾನೆ. ಸೆಪ್ಟೆಂಬರ್ 7ರಂದು ಬಡಾವಣೆಯಲ್ಲಿ ಕೂರಿಸಲಾಗಿದ್ದ ಗಣೇಶನ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಅಲ್ಲಿಯೇ ಇದ್ದ ವೀರಬಸಪ್ಪ ಜಗಳ ಬಿಡಿಸಲು ಹೋಗಿದ್ದಾನೆ. ಆಗ ಮೃತ ವೀರಬಸಪ್ಪ ಕೆನ್ನೆಗೆ ಆರೋಪಿ ಮಹೇಶ್ ಹೊಡೆದಿದ್ದಾನೆ.

ಈ ವೇಳೆ ಕುಸಿದು ಬಿದ್ದು ವೃದ್ದ ಸಾವನ್ನಪ್ಪಿದ್ದಾರೆ. ಈ ಕುರಿತು ಮೃತನ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ನೀಡಿದ್ದಾರೆ. ಈ ಬಗ್ಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹೇಶ್, ಪರಶುರಾಮ ಹಾಗೂ ಓರ್ವ ಅಪ್ರಾಪ್ತನನ್ನು ಬಂದಿಸಿದ್ದಾರೆ.

WhatsApp Group Join Now
Telegram Group Join Now
Share This Article