K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ನಗರದ ಡ್ಯಾಡಿ ಕಾಲೋನಿ ಚೈತನ್ಯ ಆಸ್ಪತ್ರೆಯಿಂದ (Hospital) ಯಕ್ಲಾಸಪೂರು ಮುಖ್ಯ ರಸ್ತೆವರೆಗೆ (Main road), ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ರಸ್ತೆ ಎರಡು ಕಡೆ 30 ಫೀಟ್ (30Feet) ಅಗಲದಂತೆ ನಿರ್ಮಾಣ ಮಾಡಬೇಕೆಂದು ಜೆಡಿಎಸ್‌ (JDS) ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಒತ್ತಾಯಿಸಿದರು..

ರಾಯಚೂರು ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ಜೆಸ್ಕಾಂ ಇಲಾಖೆಯ ಚಿಕ್ಕಸೂಗೂರು ಶಾಖೆಯ, ಶಾಖಾಧಿಕಾರಿ ನಜೀರ್‌ ಸಾಬ್ ಇವರ ಮೇಲೆ ಕಾನೂನು ಕೈಗೊಳ್ಳಬೇಕೆಂದು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ಮುಖಂಡರು ಜಿಲ್ಲಾಧಿಕಾರಿಗೆ (DC) ಮನವಿ ಸಲ್ಲಿಸಿ ಒತ್ತಾಯಿಸಿದರು..

ಸರ್ಕಾರಿ ನೌಕರರ ಸಂಘದ ಚುನಾವಣೆ ಘೋಷಣೆಯಾಗಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಎನ್‌ಪಿಎಸ್ (NPS) ನೌಕರರ ಸಂಘದ ಸದಸ್ಯರಾದ ಕೆಲ ನೌಕರರ ಹೆಸರು (Name) ಮತದಾರರ ಪಟ್ಟಿಯಿಂದ (Voter list) ಕೈ ಬಿಟ್ಟಿರುವದ್ದನ್ನು ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಆನಂದ ಕುಮಾರ ಶಾಂತಿಗೆರಾ ಹೇಳಿದರು..

ಸರ್ಕಾರಿ ಹಾಗೂ ಅರೆಸರ್ಕಾರಿ ಕಛೇರಿ ಇಲಾಖೆಗಳಲ್ಲಿ ವಿಕಲಚೇತನರ ವಿಧ್ಯಾರ್ಹತೆ ಸಾಮಾರ್ಥ್ಯಕ್ಕೆ ಅನುಗುಣವಾಗಿ ಸ್ವಯಂ ಉದ್ಯೋಗಮಾಡಲು ಸ್ಥಳಾವಕಾಶ ಒದಗಿಸುಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು..

ನಗರದ ಸಿಯಾತಲಾಬ್ ಬಡಾವಣೆಯಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪನೆ ಮಾಡಬೇಕು ಎಂದು ಮಾದಿಗ ದಂಡೋರ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ..

WhatsApp Group Join Now
Telegram Group Join Now
Share This Article