K2kannadanews.in
Crimr news ಲಿಂಗಸೂಗೂರು : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲ್ಲೂಕಿನ ಹುಣಕುಂಟಿ ಕ್ರಾಸ್ ಬಳಿ ಜರುಗಿದೆ.
ಹೌದು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹುಣಕುಂಟಿ ಕ್ರಾಸ್ ಬಳಿ ಘಟನೆ ಜರುಗಿದೆ. ಅಪಘಾತದಲ್ಲಿ ಬೈಕ್ ಸವಾರ ಮಸ್ಕಿ ತಾಲ್ಲೂಕಿನ ತಲೇಖಾನ ಬಳಿಯ ಯಾರದೊಡ್ಡಿ ನಿವಾಸಿ ಬಸನಗೌಡ ಪೊಲೀಸ್ ಪಾಟೀಲ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಇನ್ನೂ ಯಾದಗಿರಿ ಜಿಲ್ಲೆಯ ಸುರಪುರ ದಿಂದ ದಾವಣಗೇರೆ ಕಡೆಗೆ ಹೊರಟಿದ್ದ ಕಾರಿಗೆ ಮುದಗಲ್ ನಿಂದ ಲಿಂಗಸೂಗೂರು ಕಡೆಗೆ ಬರುತ್ತಿದ ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದ್ದು. ಲಿಂಗಸುಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.