ಏಕಾಏಕಿ ಅಡ್ಡ ಬಂದ ಬೈಕಿಗೆ ಡಿಕ್ಕಿ ಹೊಡೆದ ಬಸ್ : ಸವಾರನ ಕಾಲು ಮುರಿತ.

K 2 Kannada News
ಏಕಾಏಕಿ ಅಡ್ಡ ಬಂದ ಬೈಕಿಗೆ ಡಿಕ್ಕಿ ಹೊಡೆದ ಬಸ್ : ಸವಾರನ ಕಾಲು ಮುರಿತ.
WhatsApp Group Join Now
Telegram Group Join Now

K2kannadanews.in

Accident news ರಾಯಚೂರು : ಬೈಕ್‌ಗೆ ಕೆಕೆಆರ್‌ಟಿಸಿ ಬಸ್ ಡಿಕ್ಕಿ ಬೈಕ್ ಸವಾರನಿಗೆ ಕಾಲು ಮುರಿದು, ಬಸ್ಸು ರಸ್ತೆ ಬಸಿಗೆ ವಾಲಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾದ ಘಟನೆ ಯರಗೇರಾ ಗ್ರಾಮದ ಬಳಿ ನಡೆದಿದೆ.

ರಾಯಚೂರು ತಾಲೂಕಿನ ಯರಗೇರಾ ಬಳಿಯ ರಾಯಚೂರು- ಮಂತ್ರಾಲಯ ಹೆದ್ದಾರಿಯಲ್ಲಿ ನಡೆದ ಅಪಘಾತ ನಡೆದಿದ್ದು, ಜಿಟಿ ಜಿಟಿ ಮಳೆಯಲ್ಲಿ ರಾಯಚೂರಿನಿಂದ ಮಂತ್ರಾಲಯ ಕಡೆ ಹೊರಟಿದ್ದ ಬೈಕ್ ಸವಾರನಿಗೆ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬೈಟ್ ನಜ್ಜುಗುಜ್ಜಾಗಿದ್ದು, ಗಾಯಾಳು ಬೈಕ್ ಸವಾರನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗಿಲ್ಲ.

WhatsApp Group Join Now
Telegram Group Join Now
Share This Article