This is the title of the web page
This is the title of the web page
Crime News

ಸಾಲಬಾಧೆ ತಳಲಾರದೆ ರೈತ ಆತ್ಮಹತ್ಯೆ


ರಾಯಚೂರು : ತಾಲೂಕಿನ ಬಿ.ಯದ್ಲಾಪುರ ಗ್ರಾಮದ ರೈತ ನಾಗಪ್ಪ (52) ಸಾಲ ಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ

ಗಿಲ್ಲೆಸೂಗೂರು ಹೋಬಳಿ ವ್ಯಾಪ್ತಿಯ ಬಿ.ಯದ್ಲಾಪುರದ ರೈತ ನಾಗಪ್ಪ ಹೆಚ್ ಡಿಎಫ್ ಸಿ ಬ್ಯಾಂಕಿನಲ್ಲಿ 9.60 ಲಕ್ಷ ಸಾಲ ಮಾಡಿಕೊಂಡಿದ್ದರು. 9 ಎಕರೆ ಜಮೀನಿನಲ್ಲಿ ಬೆಳೆಯನ್ನೂ ಬೆಳೆಯುತ್ತಿದ್ದರು. ಆದರೆ ಅವರು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ವರ್ಷವಷ್ಟೇ ನಾಗಪ್ಪ ಅವರ ಹಿರಿಮಗ ಶಿವರಾಜ್ ಸಾಲಬಾಧೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


[ays_poll id=3]