ಮುದ್ದಾದ ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ

K 2 Kannada News
ಮುದ್ದಾದ ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ
Oplus_131072
WhatsApp Group Join Now
Telegram Group Join Now

K2kannadanews.in

Crime news ವಿಜಯನಗರ : ಒಂದೇ ಕುಟುಂಬದ ಮೂವರು (Self Harming) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ ಬಳಿಕ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ.

ವಿಜಯನಗರದ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವಮ್ಮ(24), ಮೂರು ವರ್ಷದ ದುರ್ಗಮ್ಮ, 10 ತಿಂಗಳ ಈಶ್ವರಿ ಮೃತ ದುರ್ದೈವಿಗಳು. ವಿಷಯ ತಿಳಿಯುತ್ತಿದ್ದಂತೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಶಂಕೆ ಇದ್ದು, ಘಟನೆ ಬಳಿಕ ಪತಿ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

WhatsApp Group Join Now
Telegram Group Join Now
Share This Article