This is the title of the web page
This is the title of the web page
Crime News

ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ


ರಾಯಚೂರು: ಸಿರವಾರ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಹೆಸರನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಡೆತ್‌ನೋಟ್ ಬರೆದಿಟ್ಟು ನಾಪತ್ತೆ ಆಗಿದ್ದು ಘಟನೆ ನಡೆದಿದ್ದು ಆತನಿಗಾಗಿ ಶೋಧ ಕಾರ್ಯ ಪ್ರಾರಂಭವಾಗಿದೆ.

ಜಿಲ್ಲೆಯ ಸಿರವಾರ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಗೀತಾಂಜಲಿ ಶಿಂಧೆ ಮೇಲೆ ದೌರ್ಜನ್ಯ ಎಸೆಗಿರುವ ಆರೋಪವನ್ನು ಸಿರವಾರದ ನಿವಾಸಿ ತಾಯಣ್ಣ ಎಂಬಾತ ಮಾಡಿದ್ದಾನೆ. ಈ ಸಂಬಂಧ ಆತ ಡೆತ್ ನೋಟ್ ಬರೆದಿಟ್ಟು, ನಾಪತ್ತೆಯಾಗಿದ್ದಾನೆ. ಈಗ ಪೊಲೀಸರು ತಾಯಣ್ಣನ ಹುಡುಕಾಟದಲ್ಲಿದ್ದಾರೆ. ತಮ್ಮ ಮನೆ ಜಾಗದ ವಿಚಾರವಾಗಿ ಪಿಎಸ್‌ಐ ಮಧ್ಯಪ್ರವೇಶ ಮಾಡಿದ್ದು, ಸುಖಾಸುಮ್ಮನೆ ನನ್ನನ್ನು ಠಾಣೆಗೆ ಕರೆಸಿಕೊಳ್ಳುತ್ತಿದ್ದಾರೆ. ನನ್ನನ್ನು ಕಂಡಲ್ಲಿ ನಿಲ್ಲಿಸಿ ಹೊಡೆಯುತ್ತಾರೆ. ನಾನು ರಸ್ತೆಯಲ್ಲಿ ಕಂಡಾಗಲೆಲ್ಲ ಹೀಗೆ ಮಾಡಿದ್ದಾರೆ, ಆದರೆ, ನಾನು ಇದನ್ನು ಯಾರಿಗೂ ಹೇಳಿರಲಿಲ್ಲ. ನನಗೆ ಇದರಿಂದ ಬಹಳ ನೋವಾಗಿದೆ.

ನಿನ್ನೆ ರಾತ್ರಿ ಮಲ್ಲಣ್ಣ ಎಂಬ ಪೊಲೀಸರೊಬ್ಬರು ನನ್ನನ್ನು ಕರೆದು ಪಿಎಸ್‌ಐ ಗೀತಾಂಜಲಿ ಶಿಂಧೆ ಅವರು ಕರೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ನಾನು ನನ್ನ ಮಾವನ ಮನೆಗೆ ಹೋಗುತ್ತಿದ್ದವನು ಠಾಣೆಗೆ ವಾಪಸ್‌ ಬಂದೆ. ಆದರೆ, ಬಂದ ಕೂಡಲೇ ಕಾರಣ ಹೇಳದೆ ನನ್ನನ್ನು ಲಾಕಪ್‌ನಲ್ಲಿ ವಿನಾಕಾರಣ ಕೂರಿಸಿದ್ದಾರೆ. ಬಳಿಕ ನನ್ನನ್ನು ಬಿಟ್ಟುಕಳುಹಿಸಿದ್ದಾರೆ. ಮತ್ತೆ ನನ್ನನ್ನು ಲಾಕಪ್ ಹಾಕುವ ಬೆದರಿಕೆಯನ್ನು ಒಡ್ಡಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ತಾಯಣ್ಣ ಪತ್ರದಲ್ಲಿ ಬರೆದುಕೊಂಡಿದ್ದಾರೆ.

ನನ್ನ ಪಿತ್ರಾರ್ಜಿತ ಆಸ್ತಿ ಇರುವ ಜಾಗಕೂ ನಾನು ಹೋಗುವಂತಿಲ್ಲ ಎಂದು ಪಿಎಸ್‌ಐ ಗೀತಾಂಜಲಿ ತಾಕೀತು ಮಾಡಿದ್ದಾರೆ. ಈ ಕಾರಣಕ್ಕಾಗಿ ನನ್ನ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ, ನನಗೆ ಗೀತಾಂಜಲಿ ಅವರು ಬಹಳವೇ ನೋವು ಕೊಟ್ಟಿದ್ದಾರೆ, ನನಗೆ ರೌಡಿಶೀಟರ್ ಕೇಸ್ ಹಾಕುವ ಬೆದರಿಕೆಯನ್ನೂ ಒಡ್ಡಿದ್ದಾರೆ ಎಂದು ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಪೊಲೀಸರು ಈಗ ತಾಯಣ್ಣನ ಹುಡುಕಾಟದಲ್ಲಿದ್ದಾರೆ.


[ays_poll id=3]