ಮುದಗಲ್ : ವೈದ್ಯರ ಕೊಠಡಿಯಲ್ಲಿ ಅಳವಡಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡು ಎಸಿ ಸುಟ್ಟು ಹೋಗಿರುವ ಘಟನೆ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಬ್ಲಾಸ್ಟ್ ಆಗಿದಿದೆ. ಈ ವೇಳೆ ಓರ್ವ ವೈದ್ಯರ ಕೈಗೆ ಗಾಯಗಳಾಗಿವೆ. ದಿವ್ಯ ದೃಷ್ಟಿ ಫೌಂಡೇಶನ್ನಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ನಡೆಯುತ್ತಿತ್ತು. ಶಿಬಿರದ ಲಾಭಕ್ಕಾಗಿ 100 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ಘಟನೆಯಿಂದ ದಟ್ಟ ಹೊಗೆ ಆವರಿಸಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇಂದು ನಡೆಯಬೇಕಿದ್ದ ನೇತ್ರ ಶಸ್ತ್ರಚಿಕಿತ್ಸೆಯನ್ನು ರದ್ದುಗೊಳಿಸಿ ನವಂಬರ್ 3 ಮತ್ತು 4ಕ್ಕೆ ಮುಂದೂಡಲಾಗಿದೆ ಎಂದು ದಿವ್ಯ ದೃಷ್ಟಿ ಪೌಂಡೇಶನ್ ಕಾರ್ಯದರ್ಶಿ ಡಾ.ಗುರುರಾಜ ದೇಶಪಾಂಡೆ ಅವರು ತಿಳಿಸಿದ್ದಾರೆ.
[ays_poll id=3]