This is the title of the web page
This is the title of the web page
Politics News

ಹೊಸ ಪಕ್ಷ ಘೋಷಣೆಯಾಗುತ್ತಿದ್ದಂತೆ : ರೆಡ್ಡಿ ಮಿಡ್ ನೈಟ್ ಪೊಲಿಟಿಕ್ಸ್ ..


ರಾಯಚೂರು : ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಹಿನ್ನೆಲೆಯಲ್ಲಿ ಗಣಿಧಣಿ ಗಾಲಿ ಜನಾರ್ದನ್​ ರೆಡ್ಡಿ ಅವರ ಮಿಡ್ ನೈಟ್ ಪಾಲಿಟಿಕ್ಸ್ ಆರಂಭವಾಗಿದೆ. ರಾತ್ರೋರಾತ್ರಿ ಬಿಜೆಪಿ ಮಾಜಿ ಶಾಸಕ ಪ್ರತಾಪ್​ಗೌಡ ಪಾಟೀಲ್ ರೆಡ್ಡಿಯನ್ನ ಭೇಟಿ ಮಾಡಿದ್ದಾರೆ.

ಜನಾರ್ದನ್​ ರೆಡ್ಡಿ ಹೊಸ ಪಕ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜಕೀಯ ಬೆಳವಣಿಗೆ ಗರಿಗೆದರಿದೆ. ರಾಯಚೂರಿನ ಮಸ್ಕಿ ಕ್ಷೇತ್ರಕ್ಕೆ ಕಾಂಗ್ರೆಸ್​ನಿಂದ 3 ಬಾರಿ ಪ್ರತಾಪ್​ಗೌಡ ಪಾಟೀಲ್ ಶಾಸಕರು ಆಗಿದ್ದರು. ಆದ್ರೆ ನಂತರದ ದಿನಗಳಲ್ಲಿ ಕಾಂಗ್ರೆಸ್​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್​-ಜೆಡಿಎಸ್​ನ ಸಮ್ಮಿಶ್ರ ಸರ್ಕಾರವನ್ನ ಕೆಡವಿದ್ದರು. ಬಳಿಕ ಮಸ್ಕಿಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್​ಗೌಡ ಸೋತಿದ್ದರು. ಹೀಗಾಗಿ ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿರಲಿಲ್ಲ. ಮತ್ತೆ ಪಕ್ಷ ಬದಲಾಯಿಸುವ ಆಲೋಚನೆಯಲ್ಲಿರುವ ಪ್ರತಾಪ್​ಗೌಡ ರಾತ್ರೋರಾತ್ರಿ ಜನಾರ್ದನ್ ರೆಡ್ಡಿರನ್ನ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.


[ays_poll id=3]