This is the title of the web page
This is the title of the web page
Politics NewsState NewsVideo News

ಭಿನ್ನಮತ ಸ್ಫೋಟ; ಡೀಸೆಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ..!


K2kannadanews.in

Lok Sabha Election ರಾಯಚೂರು :  ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಈಗ ಬಿಜೆಪಿ ಪಕ್ಷಕ್ಕೆ ಭಿನ್ನಮತದ ತಲೆ ನೋವು ಎದುರಾಗಿದೆ. ಟಿಕೆಟ್‌ (Ticket) ವಂಚಿತ ಅಭ್ಯರ್ಥಿ (Candidate) ಹಾಗೂ ಬೆಂಬಲಿಗರು (Followers) ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಈ ಒಂದು ಅಸಮಾಧಾನ ಇಂದು ಅತಿರಿಕಕ್ಕೆ ಹೋಗಿ ಇಬ್ಬರು ಕಾರ್ಯಕರ್ತರು ಮೈ ಮೇಲೆ ಡೀಸೆಲ್ (Diesel) ಹಾಕಿಕೊಂಡು ಆತ್ಮಹತ್ಯೆಗೆ (Attempt suicide) ಯತ್ನಿಸಿದರು.

ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಬಿ ವಿ ನಾಯಕ ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ. ಬಿಜೆಪಿ (BJP ) ಸಹ ಇದಕ್ಕೆ ಹೊರತಾಗಿಲ್ಲ. ಒಂದು ಕಡೆ ಬಂಡಾಯವನ್ನು ಶಮನ ಮಾಡುತ್ತಿದ್ದಂತೆ ಮತ್ತೊಂದು ಕಡೆ ಅಸಮಾಧಾನ ಸ್ಫೋಟಗೊಳ್ಳುತ್ತಿದೆ. ಈ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕಗೆ (Raja Amareswara Nayaka) ಟಿಕೆಟ್‌ ಕೊಟ್ಟಿರುವುದು ಬಿ.ವಿ‌. ನಾಯಕ (BV Nayaka) ಅವರನ್ನು ಕೆರಳಿಸಿದೆ. ಇದೀಗ ಅವರ ಬಣ ರೌದ್ರಾವತಾರ ತಾಳಿದ್ದು, ಪ್ರತಿಭಟನೆಯನ್ನು (Protest) ಮಾಡಿವೆ. ಅಭ್ಯರ್ಥಿ ಬದಲಾವಣೆಗೆ ಎರಡು ದಿನಗಳ ಗಡುವನ್ನು ನೀಡಿದೆ. ಇನ್ನು ಪ್ರತಿಭಟನೆ ವೇಳೆ ಬಿ.ವಿ. ನಾಯಕ ಅವರ ಅಭಿಮಾನಿಯೊಬ್ಬ ಮೈಮೇಲೆ ಡಿಸಲ್ ಸುರಿದುಕೊಂಡು ಹೈಡ್ರಾಮಾ ನಡೆಸಿದ್ದಾನೆ.


[ays_poll id=3]