ಮಾನ್ವಿ : ಹಳೇ ವೈಷಮ್ಯ ಹಿನ್ನೆಲೆ ಕಾಂಗ್ರೆಸ್ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮದ್ಲಾಪುರ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಮದ್ಲಾಪುರ ಗ್ರಾಮದ ಹತ್ತಿರ ಬಳಿ ಘಟನೆ ನಡೆದಿದೆ. ತಾಲ್ಲೂಕಿನ ರಬ್ಬಣಕಲ್ ಗ್ರಾಮದ ಪ್ರಸಾದ್(38) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಭತ್ತದ ಗದ್ದೆಗೆ ನೀರುಕಟ್ಟಲು ತೆರಳಿದಾಗ ಏಕಾಏಕಿ ಮೂರು ವ್ಯಕ್ತಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಜಮೀನಿನಲ್ಲಿ ಕಾದು ಕುಳಿತು ಮಾರಕಾಸ್ತ್ರದಿಂದ
ರಬ್ಬಣಕಲ್ ಗ್ರಾಮದ ಮೂರು ಜನ ಈ ಕೃತ್ಯವೆಸಗಿದ್ದರೆ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿತ್ತಿದ್ದಾರೆ. ಇನ್ನೂ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಯನ್ನು ಖಂಡಿಸಿ ದಲಿತ ಸಂಘಟನೆಗಳು ಮಾನವಿ ತಾಲೂಕಿನ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಬಂದಿ ಕೊಲೆ ಬಗ್ಗೆ ಹೇಳೋದು ಹೀಗೆ..
[ays_poll id=3]