ದೇವದುರ್ಗದ ಹೂವಿನಹೆಡಗಿ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆ..

K 2 Kannada News
ದೇವದುರ್ಗದ ಹೂವಿನಹೆಡಗಿ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆ..
WhatsApp Group Join Now
Telegram Group Join Now

K2kannadanews.in
Local News ದೇವದುರ್ಗ : ಮಹಾರಾಷ್ಟ್ರದ ಪಶ್ವಿಮ ಘಟ್ಟದಲ್ಲಿ ಅತಿಯಾದ ಮಳೆಯಾದ ಹಿನ್ನೆಲೆ ಕೃಷ್ಣಾ ನದಿಗೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರಿನಿಂದ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬಳಿ ಇರುವ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದೆ. ಪಶ್ಚಿಮ ಘಟಗಳಲ್ಲಿ ಸುರಿದ ಮಳೆಯಿಂದ ಬಸವಸಾಗರ ಜಲಾಶಯದಿಂದ ಹರಿದು ಬರುತ್ತಿರುವ ನೀರಿನಿಂದ ದೇವಸ್ಥಾನ ಮುಳುಗಡೆಯಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದ್ರೆ ಹೂವಿನಹೆಡಗಿ ಸೇತುವೆ ಮುಳುಗಡೆ ಭೀತಿ ಎದುರಾಗಿದೆ. ಇದೇ ರೀತಿ ನೀರಿನ ಒಳ ಹರಿವು ಹೆಚ್ಚಾದರೇ ದೇವದುರ್ಗದಿಂದ ಯಾದಗಿರಿ, ಕಲಬುರಗಿ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ. ಸದ್ಯ ಬಸವಸಾಗರ ಜಲಾಶಯದಿಂದ 75 ಸಾವಿರ ಕ್ಯೂ ಹೊರಹರಿವು ಇದ್ದು, ಜಲಾಶಯದ 25 ಗೇಟ್ ಗಳಿಂದ ಹೊರಹರಿವು ಇದೆ. ಬಸವಸಾಗರ ಜಲಾಶಯಕ್ಕೆ 75,000 ಕ್ಯೂ ಒಳಹರಿವು ಇದೆ. ನದಿಗೆ ಜನ ಜಾನುವಾರು ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

 

WhatsApp Group Join Now
Telegram Group Join Now
Share This Article