K2kannadanews.in
Political News ರಾಯಚೂರು : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಎರಡು ಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಇಂದು ಕೊನೆಯ ದಿನದ ಪ್ರಚಾರದಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಒಂದೇ ಕಾರ್ಯಕ್ರಮದಲ್ಲಿ ಮುಖಾಮುಖಿಯಾದ ಘಟನೆ ನಡೆದಿದೆ.
ರಾಯಚೂರು ನಗರದ ಆಶಾಪೂರಿ ಕಲ್ಯಾಣ ಮಂಟಪದಲ್ಲಿ ಇಂದು ಚೆಂಬರ್ ಆಫ್ ಕಾಮರ್ಸ್, ಕಾಟನ್ ಮಿಲ್ಲರ್ಸ ಅಸೋಸಿಯೇಷನ್, ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಸದಸ್ಯರೊಂದಿಗೆ ಪ್ರಚಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಒಂದು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ್ ನಾಯಕ್, ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಮುಖಮುಖಿಯಾಗಿ ಪರಸ್ಪರ ಶುಭಾಶಯ ಕೋರಿದರು. ಈ ವೇಳೆ ಶಾಸಕ ಡಾ.ಶಿವರಾಜ್ ಪಾಟಿಲ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಶುಭಾಶಯ ಕೋರಿದರು.
[ays_poll id=3]