K2kannadanews.in
Accident News : ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಹೊಡೆದ ಭೀಕರ ಅಪಘಾತದಲ್ಲಿ , ದೇವದುರ್ಗ ಮೂಲದ 3 ಪುಟಾಣಿ ಮಕ್ಕಳು ಸೇರಿ ನಾಲ್ವರು ಮೃತಪಟ್ಟ ದುರಂತ ಅಂತ್ಯ ಕಂಡ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ 3 ಪುಟಾಣಿ ಮಕ್ಕಳು ಸೇರಿ ನಾಲ್ವರ ಮೃತಪಟ್ಟ ದುರಂತ ಅಂತ್ಯ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ, ದೇವದುರ್ಗ ತಾಲ್ಲೂಕಿನ ದಂಡಮ್ಮನಹಳ್ಳಿ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗದಿಂದ ಬೆಂಗಳೂರಿಗೆ ತೆರಳುತ್ತಿರುವಾಗ , ಬೆಳಗಿನ ಜಾವ ಚಾಲಕ ನಸುಕಿನ ವೇಳೆ ನಿದ್ರೆ ಮಂಪರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆಗೆ ಡಿಕ್ಕಿ ಹೊಡೆದಿದ್ದಾನೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ, ಲಿಂಗಪ್ಪ (26), ಸಿಂಧು ಶ್ರೀ(2),ಅಯ್ಯಳಪ್ಪ (5), ರಕ್ಷಾ(3)ತಿಂಗಳು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅಲ್ಲದೇ ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಬೀರ ಗಾಯವಾಗಿದ್ದು ಯಲ್ಲಮ್ಮ 30, ಮಲ್ಲಮ್ಮ 20 ನಾಗಪ್ಪ 35 ಆಸ್ಪತ್ರೆಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ಪರಿಶೀಲನೆ ನಡೆಸಿ, ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
[ays_poll id=3]