K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷದಲ್ಲಿ ಅತೃಪತೆ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸ್ವಪಕ್ಷೀಯ ಸಚಿವರಿಂದಲೇ ದಬ್ಬಾಳಿಕೆ ಆಗುತ್ತಿದೆ ಎಂಬ ನಿಟ್ಟಿನಲ್ಲಿ ಸಾಕಷ್ಟು ಅಸಮಾಧಾನದ ಹೊಗೆ ಆಡುತ್ತಿದೆ. ಈಗಾಗಲೇ ಸಭೆ ಮಾಡಿ ಸಂಧಾನ ಮಾಡಿದರು ಕೂಡ ಮೇಲ್ನೋಟಕ್ಕೆ ಇದು ತಣ್ಣಗಾದರು ಬೋಧಿಮುಚ್ಚಿದ ಕೆಂಡದಂತಿದೆ. ಸ್ವಾಭಿಮಾನಕ್ಕೆ ಧಕ್ಕೆಯಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಈ ಶಾಸಕರು ಹೇಳಿದ್ದಾರೆ.
ಹೌದು ಈಗಾಗಲೇ ಮುಖ್ಯಮಂತ್ರಿಗಳಿಗೆ ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದು ಹೆಸರಿನಲ್ಲಿರುವ ಬಿ ಆರ್ ಪಾಟೀಲ್ ಅವರೇ ಮತ್ತೆ ಸುದ್ದಿಗೆ ಬಂದಿದ್ದಾರೆ. ಅಹಂಕಾರದಿಂದ ವರ್ತಿಸುವ ಸಚಿವರಿಂದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ನೀಡುತ್ತೇನೆ ಎಂದು ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿದ್ದಾರೆ ಎಂದು ವರದಿಯಾಗಿದೆ. ಸಚಿವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲವನ್ನೂ ನಿಯಂತ್ರಿಸುತ್ತಿದ್ದಾರೆ. ತಮ್ಮ ಮಾತಿಗೆ ಕಡಿವಾಣ ಹಾಕಿರುವುದಾಗಿ ಪಾಟೀಲ್ ಅಳಲು ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
[ays_poll id=3]