ವ್ಯಕ್ತಿಯನ್ನು ಛಿದ್ರ, ಛಿದ್ರವಾಗಿ ಕೊಲೆ ಮಾಡಿ ನದಿಗೆ ಎಸಡದ ದುಷ್ಕರ್ಮಿಗಳು..

K 2 Kannada News
ವ್ಯಕ್ತಿಯನ್ನು ಛಿದ್ರ, ಛಿದ್ರವಾಗಿ ಕೊಲೆ ಮಾಡಿ ನದಿಗೆ ಎಸಡದ ದುಷ್ಕರ್ಮಿಗಳು..
WhatsApp Group Join Now
Telegram Group Join Now

K2kannadanews.in

Crime News ಶಿವಮೊಗ್ಗ : ಅನೈತಿಕ ಸಂಬಂಧ ಹಿನ್ನೆಲೆ, ವ್ಯಕ್ತಿಯೊರ್ವನನ್ನ ದುಷ್ಕರ್ಮಿಗಳು ಛಿದ್ರ, ಛಿದ್ರವಾಗಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಕೃಷ್ಣಪ್ಪ(33) ಎಂಬುವವರು ಕೊಲೆಯಾದ ದುರ್ದೈವಿ. ಕೃಷ್ಣಪ್ಪನಿಗೆ ಮದ್ಯ ಕುಡಿಸಿ ಕಂದ್ಲಿ, ಕುಡುಗೋಲು ಮತ್ತು ಪ್ಲಾಸ್ಟಿಕ್‌ ಕೊಪ್ಪೆಗಳನ್ನ ಬಳಸಿ, ಕತ್ತರಿಸಿ ಕೊಲೆ ಮಾಡಿ ಬಳಿಕ ಎರಡು ಪ್ಲಾಸ್ಟಿಕ್‌ ಚೀಲಗಳಿಗೆ ಅಂಗಾಂಗಗಳನ್ನ ತುಂಬಿಕೊಂಡು. ಚೀಲವನ್ನ ಹಿಡಿದು ಗೋಂದಿ ಬ್ರಿಡ್ಜ್‌ ಬಳಿಯ ನದಿಗೆ ಶವದ ತುಂಡುಗಳನ್ನು ಸುರಿದು ಕಿರಣ್​ & ಆತನ ಸ್ನೇಹಿತರಾದ ಗಣೇಶ್, ಪ್ರತಾಪ್​ ಎಸ್ಕೇಪ್‌ ಆಗಿದ್ದಾರೆ.

ಕಿರಣ್​ ಎಂಬಾತ ಕೃಷ್ಣಪ್ಪನ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧ ಕೃಷ್ಣಪ್ಪ, ಕಿರಣ್​ನನ್ನು ಕರೆದು ಬೈದು ವಾರ್ನಿಂಗ್​ ಸಹ ಮಾಡಿದ್ದರು. ಸಂಶಯದ ಮೇರೆಗೆ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿದೆ. ಶಿರಾಳಕೊಪ್ಪ ಪೊಲೀಸರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Share This Article