ಲಿಂಗಸುಗೂರು : ಹತ್ತಿ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾದ ಘಟನೆ ಉಪ್ಪಾರನಂದಿಹಾಳ ಗ್ರಾಮದ ಜಮೀನಿನಲ್ಲಿ ನಡೆಸಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಉಪ್ಪಾರನಂದಿಹಾಳ ಗ್ರಾಮದಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಮೊಸಳೆ ತಪ್ಪಿಸಿಕೊಳ್ಳದಂತೆ ಮೊಸಳೆ ಸುತ್ತಲು ರೈತರು ಕಾವಲು ನಿಂತಿದ್ದಾರೆ. ಮೊಸಳೆ ಬಂದ ಮಾಹಿತಿಯನ್ನು ಅರಣ್ಯ ಇಲಾಖೆಗೆ ತಿಳಿಸಿದರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ಮೊಸಳೆ ಕಂಡು ಗ್ರಾಮಸ್ಥರು ಭಯಭೀತರಾಗಿದ್ದು, ಕಳೆದ ಇಪ್ಪತ್ತು ದಿನಗಳ ಹಿಂದೆಷ್ಟೇ ಇದೇ ಗ್ರಾಮದ ಹುಸೇನ ಸಾಬ್ ಕಡಿವಾಲ ಎನ್ನುವ ರೈತರ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಮೊಸಳೆ, ಇಂದು ಮತ್ತೆ ಇದೇ ಗ್ರಾಮದ ಜಮೀನಿನಲ್ಲಿ ಪ್ರತ್ಯಕ್ಷವಾಗಿದೆ. ಪದೇ ಪದೇ ಕಾಣಿಸುತ್ತಿರುವ ಮೊಸಳೆ ಬಯಕೆ ಗ್ರಾಮಸ್ಥರು ಜಮೀನುಗಳಿಗೆ ತೆರಳಲು ಭಯ ಪಡುತ್ತಿದ್ದಾರೆ.
[ays_poll id=3]