ರಾಯಚೂರು : ರೈಸ್ ಮಿಲ್ ದಿಂದ ಹೊರ ಸೂಸುವ ಹಾದುಬೂದಿಯಿಂದ ಅಕ್ಕ ಪಕ್ಕದ ಜಮೀನುಗಳಲ್ಲಿ ಬೆಳೆ ನಷ್ಟವಾಗುತ್ತಿದ್ದು ರೈತರಿಗೆ ಪರಿಹಾರ ಒದಗಿಸಲು ಮತ್ತು ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ನಗರದ ಇಂಡಸ್ಟ್ರಿಯಲ್ ಏರಿಯಾ ಪ್ಲಾಟ್ ನಂಬರ್ 212 ಪಿ6, 212ಪಿ7, 211/5 ರಲ್ಲಿರುವ ಮಂಚಿಕೊಂಡ ರೈಸ್ಸ್ ಮಿಲ್ ಇಂದ ದಿನನಿತ್ಯ ಭಾರಿ ಪ್ರಮಾಣದಲ್ಲಿ ಹಾರು ಬೂದಿ ಹೊರ ಸೂಸುತ್ತಿದ್ದು ಇದರಿಂದ ಗಾಳಿಗೆ ಅಕ್ಕಪಕ್ಕದ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಷ್ಟವಾಗುತ್ತಿದೆ. ಇದರಿಂದ ರೈತರು ತೊಂದರೆಯನ್ನು ಅನುಭವಿಸ ಬೇಕಾಗುತ್ತಿದೆ. ರೈತರು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ, ತಮ್ಮ ಜಮೀನುಗಳಲ್ಲಿ ಸಾಲ ಮಾಡಿಕೊಂಡು ಬೆಳೆಯನ್ನು ಬೆಳೆದಿದ್ದಾರೆ.
ಹಾರುವುದಿಂದ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಗೆ 10 ಸಾವಿರ ದರ ನಿಗದಿ ಇದ್ದು, ಈ ಭಾಗದಲ್ಲಿ ಹತ್ತಿ ಬೆಲೆ ಪ್ರತಿ ಕ್ವಿಂಟಾಲ್ ಗೆ 5 ಸಾವಿರದಿಂದ 6 ಸಾವಿರವರಗೆ ನಿಗದಿ ಪಡಿಸಲಾಗುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕೂಡಲೇ ಸದರಿ ಮಂಚುಕೊಂಡ ರೈಸ್ ಮಿಲ್ ಮೇಲೆ ಸೂಕ್ತ ಕ್ರಮ ಕೈಗೊಂಡು ಬೇಳೆನಷ್ಟ ಪರಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
[ays_poll id=3]