K2kannadanews.in
Local News ರಾಯಚೂರು : ಜಲಿಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು ರಾಯಚೂರು ಸಿಂಧನೂರು ಹೆದ್ದಾರಿಯಲ್ಲಿ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಅಸ್ತವ್ಯಸ್ತವಾದ ಘಟನೆ ಜರುಗಿದೆ.
ರಾಯಚೂರು ಜಿಲ್ಲೆಯಾದ್ಯಂತ ಭಾರಿ ಮಳೆಯಿಂದ ಮಾನ್ಬಿ ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಈ ಒಂದು ಹಳ್ಳದಲ್ಲಿ ಬಸ್ ಒಂದು ಸಿಕ್ಕಿಹಾಕಿಕೊಂಡ ಕಾರಣ ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತವಾಗಿತ್ತು ಎಂದು ಹೇಳಲಾಗುತ್ತಿದೆ. ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಅಡಚಣೆಯಾಗುತ್ತಿದೆ. ಇದೀಗ ಮಳೆ ಬಂದ ಹಿನ್ನಲೆ ಮತ್ತಷ್ಟು ಅಸ್ತವ್ಯಸ್ತವಾಗಿದೆ. ಹೆದ್ದಾರಿಯಲ್ಲಿ ಹಳ್ಳದ ಸೇತುವೆ ಕಾಮಗಾರಿ ನಡೆಯುತ್ತಿರುವ ರಸ್ತೆ ಅಗೆಯಲಾಗಿತ್ತು. ಮಳೆ ಬಂದಬಕಾರಣ ಹಳ್ಳ ಮತ್ತು ಹೊಲದಲ್ಲಿನ ಮಳೆ ನೀರು ರಭಸದಿಂದ ಹರಿಯುತ್ತಿರುವ ಕಾರಣ, ಸುಮಾರು 3 ಗಂಟೆಗಳ ಕಾಲ ಸಂಚಾರ ಸ್ಥಗಿತ ವಾಗಿತ್ತು ಎನ್ನಲಾಗಿದೆ. ಇದರಿಂದ ಎರಡು ಭಾಗದಲ್ಲಿ ಕಿಲೋಮೀಟರ್ ಗಟ್ಟಲಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪ್ರಯಾಣಿಕರು ಪರದಾಡಿದ್ದಾರೆ.