ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಆತ್ಮಹತ್ಯೆಗೆ ಶರಣು..

K 2 Kannada News
ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಆತ್ಮಹತ್ಯೆಗೆ ಶರಣು..
WhatsApp Group Join Now
Telegram Group Join Now

K2kannadanews.in

Crime News ಸಿಂಧನೂರು : ಅಂಗನವಾಡಿ ಸಹಾಯಕಿ (Helper) ಒಬ್ಬರು ಅಂಗನವಾಡಿ ಕೇಂದ್ರದಲ್ಲಿ (Anganwadi centre) ಆತ್ಮಹತ್ಯೆಗೆ ಶರಣಾದ (Suicide) ಘಟನೆ ಸಿಂಧನೂರು ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರಾಯಚೂರು (Raichur) ಜಿಲ್ಲೆಯ ಸಿಂಧನೂರು (Raichur) ನಗರದ ಟಿಪ್ಪು ಸುಲ್ತಾನ್ ಬಡಾವಣೆಯಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಮಾಲ (34) ನೇನಣಿಗೆ ಶರಣಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಮಕ್ಕಳು ಎಲ್ಲರೂ ಮನೆಗೆ ತೆರಳಿದ ನಂತರ ಕೊನೆಯಲ್ಲಿ ಉಳಿದುಕೊಂಡಿದ್ದ ಅಂಗನವಾಡಿ ಸಹಾಯಕಿ ಮಾಲಾ ಯಾರು ಇಲ್ಲದ ವೇಳೆ ನೀಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

ರಾತ್ರಿಯಾದರೂ ಅಂಗನವಾಡಿ ಕೇಂದ್ರದ ಬಾಗಿಲು ಹಾಕದೆ ಇರುವುದನ್ನು ಗಮನಿಸಿದ ಮನೆಯ ಮಾಲೀಕ ಬಂದು ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಿಂಧನೂರು ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article