This is the title of the web page
This is the title of the web page
Crime News

ವಿದ್ಯಾರ್ಥಿಯನ್ನು ಬಲಿಪಡಿದ ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್


ರಾಯಚೂರು : ಅಕ್ರಮ ಮರಳುಗಾರಿಕೆ ರಾಯಚೂರು ತಾಲೂಕಿನಲ್ಲಿ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿ ಮೃತಪಟ್ಟ ಘಟನೆ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಹೌದು ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಕಡಿಮಣ ಹಾಕಲಾಗಿದೆ ಎಂದು ಹೇಳಲಾಗುತ್ತಿದ್ದರೂ, ಅಕ್ರಮ ಮರಳು ಸಾಗಾಟ ಹೆಗ್ಗಿಲದೆ ನಡೆಯುತ್ತಿದೆ. ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಬಳಿಯ ತುಂಗಭದ್ರಾ ನದಿಯಿಂದ ದಿಂದ, ರಾಯಚೂರು ಕಡೆಗೆ ಅಕ್ರಮವಾಗಿ ಮರಳು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್, ಕೊತ್ತದೊಡ್ಡಿ ಗ್ರಾಮದ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದ ಮಲ್ಲೇಶ್ ಎಂಬುವ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ಇಡುಪನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಚಾಲಕ ನಾಗರಾಜ್ ಅಕ್ರಮವಾಗಿ ಟ್ರ್ಯಾಕ್ಟರ್ ಮೂಲಕ ಮರಳು ಸಾಗಿಸುತ್ತಿದ್ದ, ಮೃತ ದೇಹವನ್ನು ಶವಪರಿಕ್ಷೆಗಾಗಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.


[ays_poll id=3]