This is the title of the web page
This is the title of the web page
Local News

ಗಾಂಜಾ ಬೆಳೆದ ರೈತರ ಮೇಲೆ ನಿಗಾ ಇಡಿ


ರಾಯಚೂರು : ಜಿಲ್ಲೆಯಲ್ಲಿ ರೈತರ ಹೊಲಗಳಲ್ಲಿ ಗಾಂಜಾ ಬೆಳೆಯುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬಂದ ಹಿನ್ನೆಲೆ ಇಂದು ಮೂರು ಇಲಾಖೆಗಳ ಜಂಟಿ ಸಭೆಯನ್ನ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್ ಮಾಡಿ ಸಮನ್ವಯತೆಯಿಂದ ಗಾಂಜಾ ಬೆಳೆ ನಿಯಂತ್ರಿಸಲು ಸೂಚನೆ ನೀಡಿದರು.

ರಾಯಚೂರು ಜಿಲ್ಲೆಯಲ್ಲಿ ರೈತರು ತಮ್ಮ ಬೆಳೆಗಳ ಮಧ್ಯದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹಲವು ಕಡೆ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಒಂದು ಗಾಂಜಾ ಬೆಳೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕೃಷಿ ಇಲಾಖೆ ಮತ್ತು ಅಬಕಾರಿ ಇಲಾಖೆಯ ಸಭೆಯನ್ನು ಕರೆದು, ಈ ಒಂದು ಸಭೆಯಲ್ಲಿ ಮೂರು ಇಲಾಖೆಗಳು ಸಮನ್ವತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ಬೆಳೆಗಳ ಸಮೀಕ್ಷೆ ಮಾಡುವಂತಹ ಸಂದರ್ಭದಲ್ಲಿ ರೈತರ ಹೊಲಗಳಲ್ಲಿ ಯಾವ ಬೆಳೆ ಹಾಲಾಗಿದೆ, ಎಂಬ ಬಗ್ಗೆ ಪೊಲೀಸ್ ಮತ್ತು ಅಬಕಾರಿ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಾರಿ ಯಾರ ಹೊಲದಲ್ಲಿ ಗಾಂಜಾ ಬೆಳೆ ವಶಪಡಿಸಿಕೊಳ್ಳಲಾಗಿದೆಯೋ ಅವರ ಹೊಲಗಳ ಮೇಲೆ ಮುಂದಿನ ದಿನಗಳಲ್ಲಿಯೂ ನಿಗಾ ಇಡಲು ಜಿಲ್ಲಾಧಿಕಾರಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.


[ays_poll id=3]