ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ : ದದ್ದಲ್ ಮಗನಿಗು ಸುತ್ತಿಕೊಳ್ಳುತ್ತಾ ಇಡಿ..?

K 2 Kannada News
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ : ದದ್ದಲ್ ಮಗನಿಗು ಸುತ್ತಿಕೊಳ್ಳುತ್ತಾ ಇಡಿ..?
WhatsApp Group Join Now
Telegram Group Join Now

K2kannadanews.in

ED Notes ರಾಯಚೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ (Valmiki Corporation Scam) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ (Basangoda daddal) ಮಗನಿಗೂ (son) ಸಂಕಷ್ಟ ಎರುರಾಗುವ ಸಾಧ್ಯತೆ ಕಂಡುಬಂದಿದೆ. ದದ್ದಲ್ ಪುತ್ರ ತ್ರಿಶೂಲ್ (Threeshul) ಗೂ ಇ.ಡಿ ನೋಟಿಸ್ (ED Notice) ನೀಡಲಿದೆ ಎಂದು ಹೇಳಲಾಗುತ್ತಿದೆ.

ರಾಯಚೂರು (Raichur) ಜಿಲ್ಲೆಯ ಸಿರವಾರ (Sirawar) ಹೋಬಳಿಯ ಗಣದಿನ್ನಿ ಗ್ರಾಮದಲ್ಲಿ ಸರ್ವೇ ನಂ 33/1 ನಂಬರಿನ, ಬಸನಗೌಡ ತಂ ಸಿದ್ದನಗೌಡ ಎಂಬುವರಿಂದ ಜಮೀನು ಖರೀದಿ (Land parches) ಮಾಡಲಾಗಿದ್ದು, 4 ಎಕರೆ 30 ಗುಂಟೆ ಜಮೀನು ಖರೀದಿಯ ವಿವರಣೆ ಕೇಳಿ ನೋಟಿಸ್ ನೀಡಲಾಗುತ್ತಿದ್ದು, ಮಗ ತ್ರಿಶೂಲ್ ನಾಯಕ್ ಹೆಸರಲ್ಲಿ ದದ್ದಲ್ ಖರೀದಿಸಿರುವ ಜಮೀನು ಇದಾಗಿದೆ. ಅಧಿಕಾರಿ (officer) ಚಂದ್ರಶೇಖರ ಆತ್ಮಹತ್ಯೆಗೂ (Suicide) ಮುನ್ನವೇ ಜಮೀನು ಖರೀದಿ ಮಾಡಲಾಗಿತ್ತು. ಎಕರೆಗೆ 36 ಲಕ್ಷ ರೂ ಹಾಗೆ ಕೊಟ್ಟು ತ್ರಿಶೂಲ್ ಹೆಸರಲ್ಲಿ ಜಮೀನು ಖರೀದಿ ಮಾಡಲಾಗಿದೆ. 22-05-2024 ರಲ್ಲಿ ತ್ರಿಶೂಲ್ ನಾಯಕ್ ಹೆಸರಲ್ಲಿ ರಿಜಿಸ್ಟರ್ ಮಾಡಲಾಗಿದೆ. ಸದ್ಯ ದದ್ದಲ್ ಪುತ್ರ ತ್ರಿಶೂಲ್ ದೆಹಲಿಯಲ್ಲಿ ವೈದ್ಯರಾಗಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ.

WhatsApp Group Join Now
Telegram Group Join Now
Share This Article