ರಾಯಚೂರು : ಚಿರತೆ ಹೆಜ್ಜೆಗಳು ಗುರುತು ಪತ್ತೆಯಾಗಿದ್ದು, ಒಂದು ಹಸುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ಕಲ್ಮಲಾ ರಸ್ತೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಕಲ್ಲೂರು ಗ್ರಾಮದ
ಹನುಮಂತಪ್ಪ ಎಂಬುವವರ ಹಸು ಚಿರತೆ ದಾಳಿಗೆ ಬಲಿಯಾಗಿದೆ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದ ಚಿರತೆ ಪ್ರತ್ಯಕ್ಷವಾಗಿ ಕುರಿ ಮರಿಯನ್ನು ಹೊತ್ತೊಯ್ದಿತ್ತು. ಆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದರು. ಆಗ ಯಾವುದೇ ಸುಳಿವು ದೊರಕಿಲ್ಲ. ಕಳೆದ ಎರಡು ದಿನಗಳ ಹಿಂದೆ ಮಳೆ ಸುರಿದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತುಗಳು ಸ್ಪಷ್ಟವಾಗಿ ಕಂಡುಬಂದಿವೆ.
ಚಿರತೆ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಇದೀಗ ಗ್ರಾಮದಲ್ಲಿನ ಆಕಳು ಕರುವಿನ ಮೇಲೆ ದಾಳಿ ಮಡಿ, ಕೊಂಡು ಹೋದ ಕಾರಣ ಗ್ರಾಮಸ್ಥರು ಆತಂಕಗೊಂಡಿದ್ದಾರೆ ಎಂದು ಗ್ರಾಮದ ಮುಖಂಡ ಶಿವಪ್ಪಗೌಡ ಹೊಸೂರು ತಿಳಿಸಿದ್ದಾರೆ.
[ays_poll id=3]