ರಾಯಚೂರು : ಕಲ್ಯಾಣ ಕರ್ನಾಟಕ ಭಾಗಕ್ಕೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಉದ್ಯೋಗ ಸೇರಿದಂತೆ ಸರ್ವಾಗಿಣ ಅಭಿವೃದ್ಧಿಗಾಗಿ 371ಜೆ ವಿಷೇಶ ಸ್ಥಾನ ಮಾನ ಸಿಕ್ಕಿರುವುದು ಮಲ್ಲಿಕಾರ್ಜುನ್ ಖರ್ಗೇ ನಾಯಕತ್ವದ ಹೋರಾಟಕ್ಕೆ ಸಿಕ್ಕ ಫಲ ಎಂದು ಎಐಸಿಸಿ ಕಾರ್ಯದರ್ಶಿ ಎನ್ ಎಸ್ ಬೋಸರಾಜು ತಿಳಿಸಿದರು
ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನವೆಂಬರ್ 10ರಂದು ನಡೆಯುವ ಮಲ್ಲಿಕಾರ್ಜುನ್ ಖರ್ಗೆ ಅವರ ಅಭಿನಂದನಾ ಸಮಾರಂಭ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 7 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಸಲ್ಲಿಸಿದ ಅವರ ಸಾಮಾಜಿಕ ಸೇವೆ ಅಗಣಿತವಾಗಿದೆ. ಬಿಜೆಪಿ ನೇತೃತ್ವದ ವಾಜಪೇಯಿ ಸರ್ಕಾರದ ಅವಧಿಯಲ್ಲಿ 371ಜೆ ಅನುಮೋದಿಸಲು ಸಾದ್ಯವಿಲ್ಲ ಎಂದಿದ್ದನ್ನು ಮಲ್ಲಿಕಾರ್ಜುನ್ ಖರ್ಗೆ ಅವರು ಅನುಮೋದಿಸಿ ಈ ಭಾಗದ ಸರ್ವಾಂಗಿಣ ಅಭಿವೃದ್ಧಿಗೆ ನಾಂದಿಯಾಡಿದ್ದಾರೆ ಹಾಗಾಗಿ ನಾವೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಅವರಿಗೆ ಅಭಿನಂದಿಸಬೇಕೆಂದು ತಿಳಿಸಿದರು.
ನಂತರ ಬಿ.ವಿ ನಾಯಕ್ ಮಾತನಾಡಿ, ಈ ಭಾಗದ ಅಭಿವೃದ್ಧಿಯ ದೂರದೃಷಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮಲ್ಲಿಕಾರ್ಜುನ್ ಖರ್ಗೆ ಕೊಡುಗೆ ಅಪಾರವಿದೆ ಎಂದು ತಿಳಿಸಿದರು.
[ays_poll id=3]