K2kannadanews.in
Accident News ಲಿಂಗಸುಗೂರು : ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾಗರಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗರಹಾಳ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದ್ದು, ಕುಷ್ಟಗಿ ತಾಲ್ಲೂಕಿನ ಜೂಲಕುಂಟಿ ಗ್ರಾಮದ ರಫೀಕ್ ಶಾಮೆಸಾಬ(25) ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ತಾಳಿಕೋಟೆಯಿಂದ ನಾಗರಹಾಳ ಗ್ರಾಮಕ್ಕೆ ವಾಪಾಸಾಗುವ ವೇಳೆ ಅಪಘಾತ ನಡೆದಿದ್ದು, ಬೈಕ್ ನಿಯಂತ್ರಣ ತಪ್ಪಿರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಬಿದ್ದ ರಭಸಕ್ಕೆ ಕಲ್ಲುಗಳಿಗೆ ಬಡಿದುಕೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎಂದು ಹಡೆಳಲಾಗುತ್ತಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಮಸ್ಕಿ ಸಿಪಿಐ ಬಾಲಚಂದ್ರ ಲಕಂ ಭೇಟಿ ಪರಿಶೀಲನೆ ಮಾಡಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.