K2kannadanews.in
ರಾಯಚೂರು : ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದು, ಘಟನೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಸಿರವಾರದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ.
ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಪರಸ್ಥಿತಿ ಉದ್ವಿಗ್ನವಾಗಿದೆ. ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್ ಬಳಿ ಘಟನೆ ಜರುಗಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಅಮಸಧಾನ ವ್ಯಕ್ತಪಡಿಸುತ್ತಿರುವ ಪ್ರತಿಭಟನಾಕಾರರು ರಸ್ತೆ ಮಧ್ಯ ಟೈಯರ್ ಗೆ ಬೆಂಕಿ ಹಚ್ಚಿ ಸಂಚಾರ ಬಂದ್ ಮಾಡಿದ್ದಾರೆ.
ಪ್ರತಿಭಟನೆಯಿಂದ ಸಂಚಾರ ಅಸ್ಥವ್ಯದ್ಥವಾಗಿದ್ದು ಸ್ಥಳಕ್ಕೆ ಸಿರವಾರ ಪೊಲೀಸರು ಆಗಮಿಸಿದ್ದಾರೆ.
[ays_poll id=3]