This is the title of the web page
This is the title of the web page
Local News

ರಾಷ್ಟ್ರಕವಿ ಕುವೆಂಪು ಜಯಂತಿ : ಅಗತ್ಯ ಸಿದ್ಧತೆಗೆ ಸೂಚನೆ


ರಾಯಚೂರು : ಜಿಲ್ಲಾಡಳಿತದಿಂದ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಡಿ.26ರಂದು ಬೆಳಗ್ಗೆ 11ಕ್ಕೆ ನಗರದ ಟ್ಯಾಗೋರ್ ಕಾಲೇಜು ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ್ ಅವರು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಹಾಗೂ ಸರಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ವಿಶ್ವ ಮಾನವ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ಗ್ರಾ. ಪಂ ತಾಲೂಕು ಮಟ್ಟದಲ್ಲಿ ಸದರಿ ಜಯಂತ್ಯುತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು. ಜಯಂತಿ ಆಚರಣೆಗೆ ಮೂಲಭೂತ ಸೌಕರ್ಯಗಳು ಕೊರತೆಯಾಗದಂತೆ ಕ್ರಮವಹಿಸಬೇಕು ಎಂದರು.‌ ವಿಶ್ವ ಮಾನವ ಕುವೆಂಪು ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ಕಾರ್ಯಕ್ರಮ ಇರುತ್ತದೆ. ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

ಕುವೆಂಪು ಭಾವಗೀತೆ, ಕವನ, ಹಾಡುಗಳನ್ನು ಹಾಡುವುದರ ಮೂಲಕ ಇಂದಿನ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಕುವೆಂಪು ಅವರ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುವುದು. ಕಾರ್ಯಕ್ರಮಕ್ಕೆ ಬೇಕಾಗುವ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


[ays_poll id=3]