LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಗರು ಕೂತು ಕೂತು ಸೋಮಾರಿಗಳಾಗಿದ್ದಾರೆ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಕ್ರಿಯಾಶೀಲರಾಗಲು ಪಾದಯಾತ್ರೆ ಮಾಡುತ್ತಿದ್ದಾರೆ..

 

ರಾಯಚೂರು: ಬಿಜೆಪಿ ಬಳ್ಳಾರಿ ಪಾದಯಾತ್ರೆ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ಇಷ್ಟು ದಿನ ಕುಳಿತು ಕುಳಿತು ಸೋಮಾರಿಗಳಾಗಿದ್ದರು. ಇದೀಗ ಕ್ರಿಯಾಶೀಲರಾಗಬೇಕು ಎಂಬ ಕಾರಣಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅವರು ಹೇಳಿದರು. ಪಾದಯಾತ್ರೆಯ ಮೂಲಕ ಬಿಜೆಪಿಯವರು ಯಾವ ಉದ್ದೇಶ ಸಾಧಿಸಲು ಹೊರಟಿದ್ದಾರೆ ಎಂಬುದು ಸ್ಪಷ್ಟವಿಲ್ಲ. ಆದರೆ, ಅವರ ಉದ್ದೇಶ ಈಗಾಗಲೇ ಈಡೇರಿದೆ ಎಂದು ಯತೀಂದ್ರ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ರಾಜಕೀಯವಾಗಿ ಜನರ ಗಮನ ಸೆಳೆಯಲು ಇಂತಹ ಪಾದಯಾತ್ರೆಗಳನ್ನು ನಡೆಸಲಾಗುತ್ತಿದೆ. ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇದ್ದರೆ, ಪಾದಯಾತ್ರೆ ನಡೆಸುವುದಕ್ಕಿಂತ ವಿಧಾನಸಭೆ ಹಾಗೂ ಸಂಬಂಧಪಟ್ಟ ವೇದಿಕೆಗಳಲ್ಲಿ ಗಂಭೀರವಾಗಿ ಚರ್ಚಿಸಬೇಕು ಎಂದು ಅವರು ಹೇಳಿದರು. ಬಿಜೆಪಿ ನಾಯಕರು ಜನರ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದರು.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST