LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನೈತಿಕ ಸಂಬಂಧ : ನ್ಯಾಯ ಪಂಚಾಯಿತಿ ಮಧ್ಯೆ ಯುವಕನನ್ನು ಕೊಡಲಿಯಿಂದ ಹೊಡೆದು ಕೊಲೆ

https://youtu.be/xMI6BmSuiXs?si=pImEqFaceUXQI--1

ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಅನೈತಿಕ ಸಂಬಂಧ ಹಾಗೂ ಹಳೆ ದ್ವೇಷದ ಹಿನ್ನೆಲೆ ಯುವಕನೊಬ್ಬನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ. ಬಳ್ಳಾಪುರ ಗ್ರಾಮದ ವಿಜಯ ಕುಮಾರ್ (23) ಕೊಲೆಯಾದ ಯುವಕನಾಗಿದ್ದಾನೆ.

ಮಾಹಿತಿಯ ಪ್ರಕಾರ, ದಿನ್ನಿ ಗ್ರಾಮದ ಪ್ರಸಾದ್, ಮಲ್ಲೇಶ್, ಮಲ್ಲಿಕಾರ್ಜುನ್ ಹಾಗೂ ಅಮರೇಶ್ ಎಂಬುವರು ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪ್ರಸಾದ್ ಅವರ ಪತ್ನಿ ಮತ್ತು ವಿಜಯ ಕುಮಾರ್ ನಡುವೆ ಅನೈತಿಕ ಸಂಬಂಧ ಇದ್ದಿತ್ತು ಎಂಬ ಅನುಮಾನದಿಂದ ಕಳೆದ ಮೂರು ತಿಂಗಳಿನಿಂದ ಪ್ರಸಾದ್ ವಿಜಯ ಕುಮಾರ್‌ಗಾಗಿ ಹುಡುಕಾಟ ನಡೆಸುತ್ತಿದ್ದನೆಂದು ತಿಳಿದುಬಂದಿದೆ.

ನಿನ್ನೆ ಬುಳ್ಳಾಪುರ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ನ್ಯಾಯ ಪಂಚಾಯಿತಿ ನಡೆಯುತ್ತಿತ್ತು. ಈ ವೇಳೆ ವಿಜಯ ಕುಮಾರ್ ಕೂಡ ಅಲ್ಲಿದ್ದನು. ಅವನು ಅಲ್ಲಿರುವುದನ್ನು ಖಚಿತಪಡಿಸಿಕೊಂಡ ಪ್ರಸಾದ್, ಹಿಂಬದಿಯಿಂದ ಬಂದು ಕೊಡಲಿಯಿಂದ ವಿಜಯ ಕುಮಾರ್ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ವಿಜಯ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಪ್ರಸಾದ್ ಸೇರಿದಂತೆ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ. ಗ್ರಾಮದಲ್ಲಿ ಈ ಘಟನೆ ಆತಂಕದ ವಾತಾವರಣ ಸೃಷ್ಟಿಸಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..