LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಶ್ವಿನಿ, ಭೂಮಾನಂದ, ರಾಣೆಮ್ಮ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ..

ಹದಿನಾಳದಿಂದ ರಾಯಚೂರಿಗೆ ಬೃಹತ್ ಬೈಕ್ ರ‍್ಯಾಲಿ..

 

 

ಭೂಮಾನಂದ ಕೊಲೆ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದಲಿತ ಪರ ಮುಖಂಡರು ಭಾನುವಾರ ಬೃಹತ್ ಬೈಕ್ ರ‍್ಯಾಲಿ ನಡೆಸಿದರು. ಹದ್ದಿನಾಳ ಗ್ರಾಮದಿಂದ ನಗರದವರೆಗೆ ನಡೆದ ರ‍್ಯಾಲಿಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ, ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಒತ್ತಾಯಿಸಿದರು.

ದಲಿತ ಸಮುದಾಯಕ್ಕೆ ಸೇರಿದ ಭೂಮಾನಂದ ಅವರ ಕೊಲೆ ಪ್ರಕರಣ ಸೇರಿದಂತೆ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಓರ್ವ ಯುವಕನ ಕೊಲೆ ಪ್ರಕರಣಗಳನ್ನೂ ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇಂತಹ ಘಟನೆಗಳ ಹಿಂದಿರುವ ನೈಜ ಕಾರಣಗಳನ್ನು ಪತ್ತೆಹಚ್ಚಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಕರಣಗಳ ತನಿಖೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವ ಜತೆಗೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು. ರ‍್ಯಾಲಿಯ ಸಂದರ್ಭದಲ್ಲಿ ವಿವಿಧ ಘೋಷಣೆಗಳನ್ನು ಕೂಗಿ ನ್ಯಾಯಕ್ಕಾಗಿ ಒತ್ತಾಯಿಸಲಾಯಿತು.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST