LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಸನಗೌಡ ದದ್ದಲ್ ರಾಜೀನಾಮೆ

ರಾಜ್ಯ ರಾಜಕೀಯದಲ್ಲಿ ಮುಂದುವರಿದ ರಾಜೀನಾಮೆಗಳ ಮಹಾಪೂರ..

news_1785924823_0_936.webp

 

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮುಂದುವರಿದಿದ್ದು, ರಾಜೀನಾಮೆಗಳ ಸರಣಿ ಆರಂಭವಾಗಿದೆ. ಇದೀಗ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ದದ್ದಲ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಸ್ವಇಚ್ಛೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ಕೂಡಲೇ ರಾಜೀನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ನೊಳಗೆ ಅಸಮಾಧಾನ ವ್ಯಕ್ತವಾಗುತ್ತಿರುವ ಸಂದರ್ಭದಲ್ಲೇ ದದ್ದಲ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಶಾಸಕರು ಹಾಗೂ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಸನಗೌಡ ದದ್ದಲ್ ರಾಜೀನಾಮೆಹದ್ದಿನಾಳ ಕ್ರಾಸ್ ಬಳಿ ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆಲಿಂಗಸುಗೂರು ಅತ್ಯಾಚಾರ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..ಲಿಂಗಸುಗೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕರ ಸಹೋದರ ನಡುವೆ ಹೊಡೆದಾಟಗೌರಂಪೇಟೆ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ವದಂತಿ..ಭೀಕರ ಅಪಘಾತ: KKRTC ರಾಯಚೂರು ಡಿಪೊ ಬಸ್ ಹರಿದು ವ್ಯಕ್ತಿ ಸಾವುಬಂಗಿಕುಂಟಾ ರಸ್ತೆಯಲ್ಲಿ ಪೂಜಾ ಸಾಮಗ್ರಿ ಅಂಗಡಿಗೆ ಬೆಂಕಿ.‌.ಸಾರಿಗೆ ಬಸ್ ಡಿಕ್ಕಿ ಚಿಕಿತ್ಸೆ ಫಲಿಸದೆ ಬೈಕ್ ಸವಾರ ಯಾಸೀನ್ ಸಾವು..ಶಾಲೆ ಹೆಡ್‌ಮಾಸ್ಟರ್‌ಗೆ ತಿರುಗಿಬಿದ್ದ ವಿದ್ಯಾರ್ಥಿ ಕಾರಿನ ಮೇಲೆ ಕಲ್ಲು ಎಸೆಯಲು ಯತ್ನಬೈಕ್‌ಗಳ ಮೇಲೆ ಹರಿದ ಸರ್ಕಾರಿ ಸಾರಿಗೆ ಬಸ್ : ಸವಾರನ ಸ್ಥಿತಿ ಗಂಭೀರ..