LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ಬಸ್ ಡಿಕ್ಕಿ ಚಿಕಿತ್ಸೆ ಫಲಿಸದೆ ಬೈಕ್ ಸವಾರ ಯಾಸೀನ್ ಸಾವು..

ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..

 

ರಾಯಚೂರು: ಸಾರಿಗೆ ಬಸ್‌ನ ಬ್ರೇಕ್ ಫೇಲ್ ಆಗಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.

ಮೃತರನ್ನು ನಗರದ ಅಂದ್ರೂನ್ ಕಿಲ್ಲಾ ನಿವಾಸಿ ಯಾಸೀನ್ (28) ಎಂದು ಗುರುತಿಸಲಾಗಿದೆ. ಸಾರಿಗೆ ಬಸ್‌ನ ಬ್ರೇಕ್ ಫೇಲ್ ಆದ ಕಾರಣ ನಿಯಂತ್ರಣ ತಪ್ಪಿದ ಬಸ್, ಬೈಕ್‌ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಯಾಸೀನ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಸಂಬಂಧ ರಾಯಚೂರು ನಗರ ಟ್ರಾಫಿಕ್ ಪೊಲೀಸರು ಸಾರಿಗೆ ಬಸ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಸ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದ್ದು, ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಬಸ್‌ನ ಬ್ರೇಕ್ ವೈಫಲ್ಯದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕನ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಿಕುಂಟಾ ರಸ್ತೆಯಲ್ಲಿ ಪೂಜಾ ಸಾಮಗ್ರಿ ಅಂಗಡಿಗೆ ಬೆಂಕಿ.‌.ಸಾರಿಗೆ ಬಸ್ ಡಿಕ್ಕಿ ಚಿಕಿತ್ಸೆ ಫಲಿಸದೆ ಬೈಕ್ ಸವಾರ ಯಾಸೀನ್ ಸಾವು..ಶಾಲೆ ಹೆಡ್‌ಮಾಸ್ಟರ್‌ಗೆ ತಿರುಗಿಬಿದ್ದ ವಿದ್ಯಾರ್ಥಿ ಕಾರಿನ ಮೇಲೆ ಕಲ್ಲು ಎಸೆಯಲು ಯತ್ನಬೈಕ್‌ಗಳ ಮೇಲೆ ಹರಿದ ಸರ್ಕಾರಿ ಸಾರಿಗೆ ಬಸ್ : ಸವಾರನ ಸ್ಥಿತಿ ಗಂಭೀರ..ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..