ಸಿಂಧನೂರು (Sindhanur): ನಗರದ ಚೇತನ ಆಸ್ಪತ್ರೆಯ(Hospital) ಬಳಿ ಎವಿಎಸ್ ಕಾಲೇಜಿನಿಂದ (College) ಮನೆಗೆ ಹೊರಟಿದ್ದ ವಿದ್ಯಾರ್ಥಿನಿಯರ ಮೇಲೆ ಕಾರು ಎರಗಿದ್ದು, ಒಬ್ಬ ವಿದ್ಯಾರ್ಥಿನಿ(Student) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶುಕ್ರವಾರ ಸಂಜೆಯ ವೇಳೆಗೆ ಈ ಅಪಘಾತ ಸಂಭವಿಸಿದೆ. ಭೂಮಿಕಾ (17) ಅರಗಿನಮರ ಕ್ಯಾಂಪ್ ಮೃತರು. ಕಾರು ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ಅಜಾಗೂರಕತೆಯಿಂದ ಕಾರು ಡಿಕ್ಕಿ ಹೊಡೆದಿದ್ದಾನೆ.
ಇನ್ನು ನಾಲ್ವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿದ್ದು, ನಗರದ ಚೇತನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿಸಲಾಗಿದೆ.
ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.