ಲಿಂಗಸುಗೂರು : ಬೀದಿ ನಾಯಿ ದಾಳಿ ಮಾಡಿ ಕಚ್ಚಿದ ಹಿನ್ನೆಲೆಯಲ್ಲಿ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಗೊರೆಬಾಳ ಗ್ರಾಮದಲ್ಲಿ ಜರುಗಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ಘಟನೆ ಜರುಗಿದೆ ಅದೇ ಗ್ರಾಮದ ಹನುಮಂತ ಎಂಬ ಕುರಿಗಾಗಿ ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿವೆ. ದಾಳಿ ವೇಳೆ ನಾಲ್ಕು ಕುರಿಗಳು ಮೃತಪಟ್ಟಿವೆ.
ಸುಮಾರು 18 ಸಾವಿರ ಬೆಲೆಬಾಳುವ ಮೂರು ಕುರಿಗಳು ಮತ್ತು ಒಂದು ಕುರಿಮರಿ ಬೀದಿ ನಾಯಿ ದಾಳಿಯಲ್ಲಿ ಮೃತಪಟ್ಟಿವೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಬೇರೆಡೆಗೆ ಸಾಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.