ರಾಯಚೂರು ಸಮೀಪದ ಮಂತ್ರಾಲಯದಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಂಧುಗಳ ಮನೆಯಲ್ಲಿ ನಡೆದ ಪೂಜೆಯಲ್ಲಿ ಭಾಗವಹಿಸಿದ್ದವರು ಬಳಿಕ ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೈದರಾಬಾದ್ನ ಯುವನ್ ಚಂದ್ರ (5) ಮತ್ತು ಸತೀಶ್ (35), ಮಂತ್ರಾಲಯದ ರಾಘವೇಂದ್ರ (25), ಧನು (23) ಹಾಗೂ ಉರವಕೊಂಡದ ಸಂಧ್ಯಾ (22) ನಾಪತ್ತೆಯಾಗಿದ್ದಾರೆ. ನೀರಿನ ಆಳವನ್ನು ಅರಿಯದೇ ನದಿಗೆ ಇಳಿದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.