ಸಿಂಧನೂರು : ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ಶರಣಪ್ಪ (36) ಎಂಬವರು ಕುರಿಗಳನ್ನು ಮೇಯಿಸಿಕೊಂಡು ಗಂಗಾವತಿ ರಸ್ತೆ ಕಡೆ ತೆರಳುತ್ತಿದ್ದಾಗ ರಾಜಮಹಲ್ ಹೋಟೆಲ್ ಸಮೀಪ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಶರಣಪ್ಪ ಹಾಗೂ ಅವರು ಕರೆದೊಯ್ಯುತ್ತಿದ್ದ ಮೂರು ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ಮೃತಪಟ್ಟ ಕುರಿಗಳ ಅಂದಾಜು ಮೌಲ್ಯ ₹60 ಸಾವಿರ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಯಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.