LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾಯಾದಿಗಳಿಂದ ಹಲ್ಲೆಗೊಳಗಾಗಿದ್ದ ಶಿವಣ್ಣ ಚಿಕಿತ್ಸೆ ಫಲಿಸದೆ ಸಾವು..

ಆಸ್ಪತ್ರೆ ಮುಂದೆ ಪತ್ನಿ, ಕುಟುಂಬಸ್ಥರ ಆಕ್ರಂದನ..

ದೇವದುರ್ಗ : ಆರು ಎಕರೆ ಜಮೀನು ವಿವಾದಕ್ಕಾಗಿ ದಾಯಾದಿಗಳು ನಡೆಸಿದ ಮಾರಣಾಂತಿಕ ಹಲ್ಲೆಗೆ ಕೊನೆಗೂ ಒಂದು ಜೀವ ಬಲಿಯಾಗಿದೆ. 

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮ್ಯಾದರಗೋಳ ಗ್ರಾಮದಲ್ಲಿ ನಡೆದಿದ್ದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಶಿವಣ್ಣ ಎಂಬುವವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಲ್ಲೆಗೊಳಗಾದ ಮತ್ತೊಬ್ಬ ಸಂತ್ರಸ್ತ ಬಸನಗೌಡ ಎಂಬುವವರ ಸ್ಥಿತಿ ಇನ್ನು ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಖಾರದ ಪುಡಿ ಎರಚಿ ಕ್ರೂರ ಹಲ್ಲೆ :

ದಾಯಾದಿಗಳಾದ ಭೀಮರಾಯ, ರಂಗಪ್ಪ, ನಾಗರಾಜ, ಹನುಮಗೌಡ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿ ಕಣ್ಣಿಗೆ ಖಾರದ ಪುಡಿ ಎರಚಿ ಮಚ್ಚು, ಕಲ್ಲು ಹಾಗೂ ದೊಣ್ಣೆಗಳಿಂದ ಈ ಇಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಕುಟುಂಬಸ್ಥರ ಆಕ್ರೋಶ ಮತ್ತು ಅಸಮಾಧಾನ :

ಆಆರೋಪಿಗಳು ಮಚ್ಚು ಮತ್ತು ಕೊಡಲಿಯಿಂದಲೇ ಹಲ್ಲೆ ನಡೆಸಿದ್ದರೂ, ಪೊಲೀಸರು ಎಫ್‌ಐಆರ್‌ನಲ್ಲಿ (FIR) ಈ ಮಾರಕಾಸ್ತ್ರಗಳ ಉಲ್ಲೇಖವನ್ನೇ ಮಾಡಿಲ್ಲ" ಎಂದು ಮೃತರ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪತ್ನಿ ಹಾಗೂ ಸಂಬಂಧಿಕರು ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ.

ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST