LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ: KKRTC ರಾಯಚೂರು ಡಿಪೊ ಬಸ್ ಹರಿದು ವ್ಯಕ್ತಿ ಸಾವು

ಮಂತ್ರಾಲಯ ಚಟ್ನಹಳ್ಳಿ ಬಳಿ ಘಟನೆ

ರಾಯಚೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KKRTC) ಬಸ್ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಮಂತ್ರಾಲಯ ಸಮೀಪದ ಚಟ್ನಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಿಕ್ಕಯ್ಯ (55) ಎಂದು ಗುರುತಿಸಲಾಗಿದೆ.

ರಾಯಚೂರಿನಿಂದ ಮಂತ್ರಾಲಯದತ್ತ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್, ಚಟ್ನಪಲ್ಲಿ ಗ್ರಾಮದಲ್ಲಿ ಮತ್ತೊಂದು ಬಸ್‌ಗೆ ಸೈಡ್ ನೀಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ರಸ್ತೆ ದಾಟುತ್ತಿದ್ದ ತಿಕ್ಕಯ್ಯ ಅವರ ಮೇಲೆ ಬಸ್ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಸ್ ಡಿಕ್ಕಿಯ ರಭಸಕ್ಕೆ ತಿಕ್ಕಯ್ಯ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ನಗರದ ಎರಡನೇ ಘಟಕಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದೆ ಎಂದು ತಿಳಿದುಬಂದಿದೆ.

ಚಾಲಕನ ನಿರ್ಲಕ್ಷ್ಯ ಹಾಗೂ ಅಜಾಗರೂಕ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆಯ ಬಳಿಕ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಈ ಘಟನೆ ಮಾಧವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಹಾಗೂ ಚಾಲಕನ ನಿರ್ಲಕ್ಷ್ಯದ ಕುರಿತು ತನಿಖೆ ಮುಂದುವರಿಸಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೀಕರ ಅಪಘಾತ: KKRTC ರಾಯಚೂರು ಡಿಪೊ ಬಸ್ ಹರಿದು ವ್ಯಕ್ತಿ ಸಾವುಬಂಗಿಕುಂಟಾ ರಸ್ತೆಯಲ್ಲಿ ಪೂಜಾ ಸಾಮಗ್ರಿ ಅಂಗಡಿಗೆ ಬೆಂಕಿ.‌.ಸಾರಿಗೆ ಬಸ್ ಡಿಕ್ಕಿ ಚಿಕಿತ್ಸೆ ಫಲಿಸದೆ ಬೈಕ್ ಸವಾರ ಯಾಸೀನ್ ಸಾವು..ಶಾಲೆ ಹೆಡ್‌ಮಾಸ್ಟರ್‌ಗೆ ತಿರುಗಿಬಿದ್ದ ವಿದ್ಯಾರ್ಥಿ ಕಾರಿನ ಮೇಲೆ ಕಲ್ಲು ಎಸೆಯಲು ಯತ್ನಬೈಕ್‌ಗಳ ಮೇಲೆ ಹರಿದ ಸರ್ಕಾರಿ ಸಾರಿಗೆ ಬಸ್ : ಸವಾರನ ಸ್ಥಿತಿ ಗಂಭೀರ..ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..