K2kannadanews.in
Political News ರಾಯಚೂರು : ಯಾದಗಿರಿ (Yadgiri) ರಾಯಚೂರು (Raichur) ಜಿಲ್ಲೆಗಳನ್ನು ಒಳಗೊಂಡಿರುವಂತಹ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ (Loka sbha election) ಇಂದಿನಿಂದ ಚುನಾವಣೆ ನಾಮಪತ್ರ (nomination process) ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಮೇ 7ಕ್ಕೆ ರಾಜ್ಯದ 14 ಕ್ಷೇತ್ರಗಳ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ, ಇಂದಿನಿಂದ ಏಪ್ರಿಲ್ (April) 19ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಇಂದಿನಿಂದ ಜಿಲ್ಲಾ ಚುನಾವಣೆ ಅಧಿಕಾರಿ ಕಚೇರಿಯಲ್ಲಿ (Election office) ನಾಮಪತ್ರ ಸಲ್ಲಿಕೆ ಕಾರ್ಯ ಆರಂಬಿಸಿದ್ದು, ಬೃಹತ್ ರೋಡ್ ಶೋ (Road show) ಮೂಲಕ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಇನ್ನೂ ರಾಯಚೂರು ಅಖಾಡಕ್ಕೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಜಿ. ಕುಮಾರ್ ನಾಯಕ್ ಪ್ರಥಮ ಬಾರಿ ಸ್ಪರ್ಧೆಗೆ ಅಣಿಯಾಗಿದ್ದರೆ, ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ ಬಿಜೆಪಿ ಅಭ್ಯರ್ಥಿ ರಾಜ ಅಮರೇಶ್ವರ ನಾಯಕ್. ಗೊಂದಲದ ಮಧ್ಯಯೂ ಬಿಜೆಪಿ ಪಕ್ಷದ ಚೌಕಟ್ಟಿನಲ್ಲಿ ನಾಮಪತ್ರ ಸಲ್ಲಿಸುವುದಾಗಿ ಮಾಜಿ ಸಂಸದ ಬಿ ವಿ ನಾಯಕ್ ಹೇಳಿದ್ದಾರೆ.
[ays_poll id=3]