This is the title of the web page
This is the title of the web page
State News

NPS ರದ್ದತಿ : ಸಿಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ


K2kannadanews.in

News Desk : ಸರ್ಕಾರಿ ನೌಕರರ (Government Employees ) ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್(NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸುವ ಬೇಡಿಕೆ ಈಡೇರಿಸುವ ವಿಚಾರಕ್ಕೆ ಸಿಎಂ ಸಿದ್ಧರಾಮಯ್ಯ (CM Siddaramaiah) ಇಂದು ಮಹತ್ವದ (Important) ಘೋಷಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ( Cancellation of NPS ) ಬಗ್ಗೆ ಚರ್ಚಿಸಿದರು. ಬಳಿಕ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ, ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಎನ್.ಪಿ.ಎಸ್ ರದ್ದತಿಯ ಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು.


[ays_poll id=3]