This is the title of the web page
This is the title of the web page
Politics News

ಬಿಜೆಪಿಗೆ ಕ್ರೌರ್ಯದ ಪರಮಾವಧಿ : ಜೆಡಿಎಸ್


K2 ಪೊಲಿಟಿಕಲ್ ನ್ಯೂಸ್ : ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಇದೀಗ ಟೀಕೆಗಳು ಸಾಕಷ್ಟು ಕೇಳಿಬರುತ್ತವೆ. ರಾಜಕೀಯ ವಲಯದಲ್ಲಿ ಚುನಾವಣೆ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ, ಆರೋಪ ಪ್ರತ್ತ್ಯಾರೋಪಗಳು ಸಾಕಷ್ಟು ಕೇಳಿಬರುತ್ತಿದ್ದು, ಈಗ ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿ, ಬಿಜೆಪಿ ಪಕ್ಷಕ್ಕೆ ಕನ್ನಡಿಗರೇ ಬುದ್ದಿ ಕಲಿಸುತ್ತಾರೆ ಎಂದು ಅಸಮಾಧಾನ ಹೊರಹಾಕಿದ.

ಕನ್ನಡಿಗರನ್ನು ಮುಳುಗಿಸುವವರೆಗೂ ಡಬಲ್ ಎಂಜಿನ್ ಬಿಜೆಪಿಯವರಿಗೆ ಸಮಾಧಾನ ಇಲ್ಲವೆ? ಎಂದು ಜೆಡಿಎಸ್ ಪ್ರಶ್ನಿಸಿದೆ. ವಿದ್ಯುತ್ ದರ ಹೆಚ್ಚಳ ಸುದ್ದಿಗೆ ಪ್ರತಿಕ್ರಿಯಿಸಿರುವ ಜೆಡಿಎಸ್, ಹಣದುಬ್ಬರ ಸಮಸ್ಯೆ ಮತ್ತೆ ಹೆಚ್ಚಾಗಿ, ಕಣ್ಣೀರಿನಲ್ಲಿ ರಾಜ್ಯದ ಜನರು ಕೈತೊಳೆದುಕೊಳ್ಳುವ ಸ್ಥಿತಿಗೆ ತಳ್ಳುತ್ತಿದ್ದೀರಿ. ಇದು ಕ್ರೌರ್ಯದ ಪರಮಾವಧಿ. ಜನರ ನೆಮ್ಮದಿ, ದುಡಿಮೆ, ಆದಾಯ ಎಲ್ಲವನ್ನೂ ಕಿತ್ತು ತಿನ್ನುವ ನಿಮಗೆ ಕನ್ನಡಿಗರು ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.


[ays_poll id=3]