
ಸಿಂಧನೂರು : ನಗರದ ಎಂ.ಕೆ ಗೋಪಾಲ ನಗರದ ಪಕ್ಕದಲ್ಲಿ ಇರುವ ಹಳ್ಳದ ಪಕ್ಕದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು, ನಗರದ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬುವರು ಮೃತಪಟ್ಟ ಘಟನೆ ನಡೆದಿದೆ.
ಹೌದು, ಸಿಂಧನೂರಿನ ಪ್ರಶಾಂತ್ ನಗರದ ನಿವಾಸಿಯಾಗಿರುವ ರಾಘವೇಂದ್ರ ಕುಲಕರ್ಣಿ ಅವರು ರಾತ್ರಿ 10 ಗಂಟೆಗೆ ಮನೆಯಿಂದ ಹೊರಗೆ ಹೋಗಿದ್ದವರು ಶವವಾಗಿ ಪತ್ತೆಯಾಗಿದ್ದಾರೆ. ಬೆಳಗಿನ ಜಾವ ವಾಕಿಂಗ್ ಹೋದ ಸಾರ್ವಜನಿಕರು ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಮೃತಪಟ್ಟ ರಾಘವೇಂದ್ರ ಕುಲಕರ್ಣಿ ಅವರು ಮಾನಸಿಕ ಅಸ್ವಸ್ಥರಾಗಿದ್ದರು. ರಾತ್ರಿ 10ಗೆ ಮನೆಯಿಂದ ಹೋಗಿದ್ದರು. ಆ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದ ವೇಳೆ, ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಹೇಳುತ್ತಿದ್ದಾರೆ. ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ಸೇವ ಪರೀಕ್ಷೆಗಾಗಿ ಶುಭ ಸಾಗಿಸಲಾಗಿದೆ. ಇನ್ನು ಈ ಘಟನೆ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಕುಟುಂಬಸ್ಥರು ಪ್ರಕರಣ ದಾಖಲಿಸಿಲ್ಲ.
![]() |
![]() |
![]() |
![]() |
![]() |
[ays_poll id=3]