K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಸರ್ಕಾರ ದೇಶದ ರಾಜಕಾರಣ ಮಾಡುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೇಶದ ರಾಜಕಾರಣ ಬಿಟ್ಟು ವಿದ್ಯಾರ್ಥಿಗಳ ಭವಿಷ್ಯ ನೋಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಕೆ.ಸುಧಾಕರ್ ಗರಂ ಆಗಿದ್ದಾರೆ.
ಮುಖ್ಯಮಂತ್ರಿಗಳೇ ದ್ವೇಷದ ರಾಜಕಾರಣ ಮಾಡಬೇಡಿ. ನನ್ನ ಮೇಲಿನ ಸೇಡಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ ಕೊಡಬೇಡಿ. ಮೊದಲು ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ಹಣ ಮಂಜೂರು ಮಾಡಿ, ಮಾನವೀಯತೆ ಇದ್ದರೆ ಸಿದ್ದರಾಮಯ್ಯ ಕೆಲಸ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಏನು ಶಾಶ್ವತವಾಗಿ ನೀವೇ ಸಿಎಂ ಆಗಿರುತ್ತೀರಾ? ನಾನು ಹಗರಣ ಮಾಡಿದ್ದರೆ ನನಗೆ ಕಠಿಣ ಶಿಕ್ಷೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
[ays_poll id=3]